ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾತನಾಡಿ, ನಂಜನಗೂಡಿನ ಔಷಧ ಕಾರ್ಖಾನೆಯಿಂದ ಸೋಂಕು ತಗುಲಲು ಮೂಲ ಕಾರಣ ಯಾವುದು ಎಂಬ ಬಗ್ಗೆ ಸೂಕ್ತ ತನಿಖೆಯಾಗಲು ಅಧಿಕಾರಿಯನ್ನು ನೇಮಿಸುವಂತೆ ನಾನು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದೆ. ಈ ಹಿನ್ನೆಲೆಯಲ್ಲಿ ಕೊರೊನಾ ಪ್ರಕರಣಕ್ಕೆ ಜಿಲ್ಲಾ ಉಸ್ತುವಾರಿ ಅಧಿಕಾರಿಯಾಗಿರುವ ಹರ್ಷ ಗುಪ್ತ ಅವರು ಶೀಘ್ರವಾಗಿ ಕಾರ್ಖಾನೆಯ ಸೋಂಕಿನ ಮೂಲವನ್ನು ಪತ್ತೆಹಚ್ಚಿ ಸರ್ಕಾರಕ್ಕೆ ವರದಿ ಕೊಡಲು ಮುಖ್ಯಮಂತ್ರಿ ಆದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ವರದಿ ಬರಲಿದೆ ಎಂದು ತಿಳಿಸಿದರು.