ಕರಡಿ ಉರುಳಿಗೆ ಸಿಲುಕಿ ಸಾವು ಬದುಕಿನ ನಡುವೆ ಒದ್ದಾಡುತ್ತಿದೆ ಎಂದು ಗ್ರಾಮಸ್ಥರೊಬ್ಬರು ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಪಶು ವೈದ್ಯ ನಾಗರಾಜು ಅರಿವಳಿಕೆ ನೀಡಿದರು. ಪ್ರಜ್ಞೆ ತಪ್ಪಿದ ಕರಡಿಯನ್ನು ಬಲೆ ಹಾಕಿ ಹಿಡಿಯಲಾಯಿತು. ನಂತರ, ಇದನ್ನು ಯಡಿಯಾಲ ಅರಣ್ಯಕ್ಕೆ ಬಿಡಲಾಯಿತು ಎಂದು ಮೂಲಗಳು ತಿಳಿಸಿವೆ.