‘ಆನ್ಲೈನ್ ಶಿಕ್ಷಣ ಮಕ್ಕಳಿಗೆ ಮಾನಸಿಕ ಹಿಂಸೆ ನೀಡುತ್ತಿದೆ. ಪೋಷಕರಿಗೂ ಕಿರಿಕಿರಿ ಮಾಡುತ್ತಿದೆ. ಇದೀಗ ಕೊರೊನಾ ವೈರಸ್ ಸೋಂಕು ಹರಡುವುದು ಇಳಿಮುಖವಾಗುತ್ತಿದೆ. ಪದವಿ ಕಾಲೇಜುಗಳನ್ನು ಆರಂಭಿಸುವಂತೆ ಸಂಘದ ವತಿಯಿಂದ ಉನ್ನತ ಶಿಕ್ಷಣ ಸಚಿವರ ಜೊತೆ ಈಚೆಗಷ್ಟೇ ಚರ್ಚಿಸಿದ್ದೆವು. ಮುಖ್ಯಮಂತ್ರಿ ಕಾಲೇಜು ಆರಂಭಕ್ಕೆ ಹಸಿರು ನಿಶಾನೆ ತೋರಿದ್ದು ಒಳ್ಳೆಯ ಬೆಳವಣಿಗೆ’ ಎಂದು ಸಿಂಧನಕೇರಾ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.