ಮೈಸೂರು: ತೀವ್ರ ಹೃದಯಾಘಾತದಿಂದ ಇಲ್ಲಿನ ಸುಯೋಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಅವರು ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.
ಇವರು ಮೇ 17ರಂದು ಸಂಜೆ ಕುವೆಂಪುನಗರದ ತಮ್ಮ ನಿವಾಸದ ಬಳಿ ವಾಯುವಿಹಾರ ಮಾಡುತ್ತಿದ್ದಾಗ ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದಿದ್ದರು. ನಂತರ, ಇವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.