<p>ಮೈಸೂರು: ‘370 ನೇ ವಿಧಿ ರದ್ದತಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿರುವ ಸಾಹಿತಿ ಕೆ.ಎಸ್.ಭಗವಾನ್, ಪ್ರಧಾನಿಗೆ ಜೈಕಾರ ಹಾಕಿದ್ದಾರೆ. ಈ ಕುರಿತು ಹೇಳಿಕೆ ನೀಡಿದ್ದು, ‘ಇಂಥ ನಿರ್ಧಾರದಿಂದ ಮೋದಿ, ಇತಿಹಾಸದಲ್ಲಿ ಅಜರಾಮರ<br />ರಾಗಿ ಉಳಿಯುವರು’ ಎಂದಿದ್ದಾರೆ.</p>.<p>‘ಆರ್ಟಿಕಲ್ 370ನ್ನು ರದ್ದತಿ ಮೂಲಕ, ರಾಷ್ಟ್ರವನ್ನು ಹಾಗೂ 72 ವರ್ಷಗಳಿಂದ ಸಂಕಟದಲ್ಲಿ ನರಳುತ್ತಿದ್ದ ಕಾಶ್ಮೀರದ ಜನತೆಯನ್ನು ನಮ್ಮ ನೆಚ್ಚಿನ ಪ್ರಧಾನಿ ಸಂತಸಪಡಿಸಿದ್ದಾರೆ. ಅಲ್ಲಿ, ಕೋಟಿಗಟ್ಟಲೆ ಖರ್ಚು ಮಾಡುತ್ತಿದ್ದ ಹಣವನ್ನು ಇನ್ನುಮುಂದೆ ಜನತೆಯ ಕಲ್ಯಾಣಕ್ಕಾಗಿ, ಅಭಿವೃದ್ಧಿಗಾಗಿ ಬಳಸಲು ಅನುಕೂಲ’ ಎಂದು ಹೇಳಿದ್ದಾರೆ.</p>.<p>ಇಡೀ ದೇಶವನ್ನು ಒಂದೇ ಸಂವಿಧಾನದ ಅಡಿ ತಂದಿರುವುದು ಬಹಳ ಶ್ಲಾಘನೀಯ ಕಾರ್ಯ. ಇದಕ್ಕಾಗಿ ಇಡೀ ರಾಷ್ಟ್ರ ತಹ ತಹಿಸುತ್ತಿತ್ತು. ಸನ್ಮಾನ್ಯ ಮೋದಿ ಇತಿಹಾಸದಲ್ಲಿ ಅಜರಾಮರವಾಗಿ ಉಳಿಯುತ್ತಾರೆ ಎನ್ನಲು ಸಂತೋಷ ಮತ್ತು ಹೆಮ್ಮೆ ಆಗುತ್ತದೆ. ಜೈ ನರೇಂದ್ರ ಮೋದಿ!’ ಎಂದು ಭಗವಾನ್ ಹೊಗಳಿದ್ದಾರೆ.</p>.<p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಅವರು, ‘ಈ ಪತ್ರವನ್ನು ಕುಹಕದಿಂದಾಗಲೀ, ವ್ಯಂಗ್ಯದಿಂದಾಗಲೀ ಬರೆದಿಲ್ಲ. ಕಾಶ್ಮೀರ ವಿಷಯದಲ್ಲಿ ಕೇಂದ್ರ ಸರ್ಕಾರದ ನಿರ್ಧಾರ ಸರಿಯಾಗಿದೆ. ಹಾಗಾಗಿ, ಮುಕ್ತ ಮನಸ್ಸಿನಿಂದ ಶ್ಲಾಘಿಸಿದ್ದೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘370 ನೇ ವಿಧಿ ರದ್ದತಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿರುವ ಸಾಹಿತಿ ಕೆ.ಎಸ್.ಭಗವಾನ್, ಪ್ರಧಾನಿಗೆ ಜೈಕಾರ ಹಾಕಿದ್ದಾರೆ. ಈ ಕುರಿತು ಹೇಳಿಕೆ ನೀಡಿದ್ದು, ‘ಇಂಥ ನಿರ್ಧಾರದಿಂದ ಮೋದಿ, ಇತಿಹಾಸದಲ್ಲಿ ಅಜರಾಮರ<br />ರಾಗಿ ಉಳಿಯುವರು’ ಎಂದಿದ್ದಾರೆ.</p>.<p>‘ಆರ್ಟಿಕಲ್ 370ನ್ನು ರದ್ದತಿ ಮೂಲಕ, ರಾಷ್ಟ್ರವನ್ನು ಹಾಗೂ 72 ವರ್ಷಗಳಿಂದ ಸಂಕಟದಲ್ಲಿ ನರಳುತ್ತಿದ್ದ ಕಾಶ್ಮೀರದ ಜನತೆಯನ್ನು ನಮ್ಮ ನೆಚ್ಚಿನ ಪ್ರಧಾನಿ ಸಂತಸಪಡಿಸಿದ್ದಾರೆ. ಅಲ್ಲಿ, ಕೋಟಿಗಟ್ಟಲೆ ಖರ್ಚು ಮಾಡುತ್ತಿದ್ದ ಹಣವನ್ನು ಇನ್ನುಮುಂದೆ ಜನತೆಯ ಕಲ್ಯಾಣಕ್ಕಾಗಿ, ಅಭಿವೃದ್ಧಿಗಾಗಿ ಬಳಸಲು ಅನುಕೂಲ’ ಎಂದು ಹೇಳಿದ್ದಾರೆ.</p>.<p>ಇಡೀ ದೇಶವನ್ನು ಒಂದೇ ಸಂವಿಧಾನದ ಅಡಿ ತಂದಿರುವುದು ಬಹಳ ಶ್ಲಾಘನೀಯ ಕಾರ್ಯ. ಇದಕ್ಕಾಗಿ ಇಡೀ ರಾಷ್ಟ್ರ ತಹ ತಹಿಸುತ್ತಿತ್ತು. ಸನ್ಮಾನ್ಯ ಮೋದಿ ಇತಿಹಾಸದಲ್ಲಿ ಅಜರಾಮರವಾಗಿ ಉಳಿಯುತ್ತಾರೆ ಎನ್ನಲು ಸಂತೋಷ ಮತ್ತು ಹೆಮ್ಮೆ ಆಗುತ್ತದೆ. ಜೈ ನರೇಂದ್ರ ಮೋದಿ!’ ಎಂದು ಭಗವಾನ್ ಹೊಗಳಿದ್ದಾರೆ.</p>.<p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಅವರು, ‘ಈ ಪತ್ರವನ್ನು ಕುಹಕದಿಂದಾಗಲೀ, ವ್ಯಂಗ್ಯದಿಂದಾಗಲೀ ಬರೆದಿಲ್ಲ. ಕಾಶ್ಮೀರ ವಿಷಯದಲ್ಲಿ ಕೇಂದ್ರ ಸರ್ಕಾರದ ನಿರ್ಧಾರ ಸರಿಯಾಗಿದೆ. ಹಾಗಾಗಿ, ಮುಕ್ತ ಮನಸ್ಸಿನಿಂದ ಶ್ಲಾಘಿಸಿದ್ದೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>