ಮೈಸೂರು: ‘ನಾನು ಪೊಲೀಸ್ ಕಮೀಷನರ್ ಆಗಿರುವಾಗ, ಆ ಸ್ಥಾನಕ್ಕೆ ಹಿರಿಯ ಅಧಿಕಾರಿಗಳಿದ್ದರೂ, ತುಂಬಾ ಕಿರಿಯ ಬ್ಯಾಚ್ನ ಅಧಿಕಾರಿಯಾಗಿದ್ದ ಅಮೃತ್ ಪಾಲ್ ಅವರನ್ನು ನೇಮಿಸುವ ಪ್ರಯತ್ನ ನಡೆದಿತ್ತು. ಅಚ್ಚರಿ ಜೊತೆಗೆ ಅನುಮಾನವನ್ನೂ ಮೂಡಿಸಿತ್ತು’ ಎಂದು ಆಮ್ ಆದ್ಮಿ ಪಕ್ಷದ ಮುಖಂಡ, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಹೇಳಿದರು.