<p><strong>ಮೈಸೂರು: </strong>ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಬೇರೆಯವರಿಗೆ ಸೇರಿದ ಭೂಮಿಯನ್ನು ಮಾರಾಟ ಮಾಡಿ, ಕೋಟ್ಯಂತರ ರೂಪಾಯಿ ಬ್ಯಾಂಕ್ ಸಾಲ ಪಡೆದು ವಂಚಿಸಿದ 6 ಮಂದಿಯನ್ನು ಅಶೋಕಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಯೋಗೇಶ್, ಮಂಜು, ಮಹಾಲಿಂಗ, ರಾಜೇಶ್ವರಿ, ಭಾಗ್ಯಮ್ಮ, ಮತ್ತು ಕಾಶಿರೆಡ್ಡಿ ವೇದಾವತಿ ಬಂಧಿತರು.</p>.<p><strong>ಏನಿದು ಪ್ರಕರಣ?:</strong> ಇಲ್ಲಿನ ಶ್ರೀರಾಂಪುರದ ನಿವಾಸಿಗಳಾದ ಶ್ಯಾಮಲಾ ಮತ್ತು ಇಂದ್ರಮ್ಮ ಎಂಬುವವರಿಗೆ ಸೇರಿದ ಶ್ರೀರಾಂಪುರದ 4.36 ಎಕರೆ ಜಮೀನು ಮಹೇಶ್ ಎಂಬವವರಿಗೆ ‘ಜಿಪಿಎ’ ಆಗಿರುತ್ತದೆ. ಇವರಲ್ಲಿ 2018ರಲ್ಲಿ ಇಂದ್ರಮ್ಮ ಅವರು ನಿಧನರಾಗುತ್ತಾರೆ. ಈ ಮಾಹಿತಿ ತಿಳಿದ ಮಹಾಲಿಂಗ ಎಂಬ ಆರೋಪಿಯು ಯೋಗೇಶ್ ಮತ್ತು ಮಂಜು ಅವರಿಗೆ ಈ ಕುರಿತ ದಾಖಲಾತಿಗಳನ್ನು ನೀಡಿ ನಕಲಿ ದಾಖಲೆಗಳನ್ನು ಸೃಷ್ಟಿಸುವ ಸಂಚು ನಡೆಸುತ್ತಾನೆ.</p>.<p>ರಾಜೇಶ್ವರಿ ಹಾಗೂ ಭಾಗ್ಯಮ್ಮ ಎಂಬ ಮಹಿಳೆಯರನ್ನು ಅಸಲಿ ಮಾಲೀಕರಾದ ಶ್ಯಾಮಲಾ ಹಾಗೂ ಇಂದ್ರಮ್ಮ ಅವರೆಂದು ಬಿಂಬಿಸಿ, ಅವರ ಹೆಸರಿನಲ್ಲಿ ಪಾನ್ಕಾರ್ಡ್, ಆಧಾರ್ ಕಾರ್ಡ್ ಮತ್ತು ಇತರೆ ದಾಖಲಾತಿಗಳನ್ನು ಸೃಷ್ಟಿಸುತ್ತಾರೆ. ನಂತರ, ಈ ಜಮೀನನನ್ನು ಹಲವು ಮಂದಿಗೆ ಮಾರಾಟ ಮಾಡುತ್ತಾರೆ. ಜತೆಗೆ, ಆಂಧ್ರಪ್ರದೇಶದ ಕಡೂರಿನ ವಸುಮತಮ್ಮ ಮತ್ತು ಕಾಶಿರೆಡ್ಡಿ, ವೇದಾವತಿ ಎಂಬುವವರೊಂದಿಗೆ ಎಸ್ಬಿಐ ನೆಲ್ಲೂರು ಶಾಖೆಯಲ್ಲಿ ಒಟ್ಟು ₹ 4 ಕೋಟಿ ಸಾಲ ಪಡೆದುಕೊಂಡಿರುತ್ತಾರೆ.</p>.<p>ಸಾಲ ಪಾವತಿಸದೇ ಇದ್ದಾಗ ಮೂಲ ‘ಜಿಪಿಎ’ ಹೊಂದಿದ ಮಹೇಶ್ ಅವರಿಗೆ ಬ್ಯಾಂಕಿನಿಂದ ನೋಟಿಸ್ ಬರುತ್ತದೆ. ಆಗ ಬೆಚ್ಚಿಬಿದ್ದ ಇವರು ಅಶೋಕಪುರಂ ಠಾಣೆಗೆ ದೂರು ನೀಡುತ್ತಾರೆ.</p>.<p>ಕೃಷ್ಣರಾಜ ವಿಭಾಗದ ಎಸಿಪಿ ಪೂರ್ಣಚಂದ್ರ ತೇಜಸ್ವಿ ಅವರು ಪ್ರಕರಣದ ತನಿಖೆಯ ಹೊಣೆಯನ್ನು ಇನ್ಸ್ಪೆಕ್ಟರ್ ಬಿ.ಎಸ್.ಪ್ರಕಾಶ್ ಅವರಿಗೆ ವಹಿಸುತ್ತಾರೆ. ತನಿಖೆ ಕೈಗೊಂಡ ಪೊಲೀಸರು ಆಂಧ್ರಪ್ರದೇಶಕ್ಕೆ ತೆರಳಿ ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>ಕಾರ್ಯಾಚರಣೆ ತಂಡದಲ್ಲಿ ಮಹದೇವಯ್ಯ, ಆನಂದ್, ರಾಘವೇಂದ್ರ, ಶಿವಪ್ರಕಾಶ್, ಮಹೇಶ್, ಸಂದೀಪ್, ನಿತೀಶ್, ಶೈಲಾಜು, ವಸಂತ ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಬೇರೆಯವರಿಗೆ ಸೇರಿದ ಭೂಮಿಯನ್ನು ಮಾರಾಟ ಮಾಡಿ, ಕೋಟ್ಯಂತರ ರೂಪಾಯಿ ಬ್ಯಾಂಕ್ ಸಾಲ ಪಡೆದು ವಂಚಿಸಿದ 6 ಮಂದಿಯನ್ನು ಅಶೋಕಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಯೋಗೇಶ್, ಮಂಜು, ಮಹಾಲಿಂಗ, ರಾಜೇಶ್ವರಿ, ಭಾಗ್ಯಮ್ಮ, ಮತ್ತು ಕಾಶಿರೆಡ್ಡಿ ವೇದಾವತಿ ಬಂಧಿತರು.</p>.<p><strong>ಏನಿದು ಪ್ರಕರಣ?:</strong> ಇಲ್ಲಿನ ಶ್ರೀರಾಂಪುರದ ನಿವಾಸಿಗಳಾದ ಶ್ಯಾಮಲಾ ಮತ್ತು ಇಂದ್ರಮ್ಮ ಎಂಬುವವರಿಗೆ ಸೇರಿದ ಶ್ರೀರಾಂಪುರದ 4.36 ಎಕರೆ ಜಮೀನು ಮಹೇಶ್ ಎಂಬವವರಿಗೆ ‘ಜಿಪಿಎ’ ಆಗಿರುತ್ತದೆ. ಇವರಲ್ಲಿ 2018ರಲ್ಲಿ ಇಂದ್ರಮ್ಮ ಅವರು ನಿಧನರಾಗುತ್ತಾರೆ. ಈ ಮಾಹಿತಿ ತಿಳಿದ ಮಹಾಲಿಂಗ ಎಂಬ ಆರೋಪಿಯು ಯೋಗೇಶ್ ಮತ್ತು ಮಂಜು ಅವರಿಗೆ ಈ ಕುರಿತ ದಾಖಲಾತಿಗಳನ್ನು ನೀಡಿ ನಕಲಿ ದಾಖಲೆಗಳನ್ನು ಸೃಷ್ಟಿಸುವ ಸಂಚು ನಡೆಸುತ್ತಾನೆ.</p>.<p>ರಾಜೇಶ್ವರಿ ಹಾಗೂ ಭಾಗ್ಯಮ್ಮ ಎಂಬ ಮಹಿಳೆಯರನ್ನು ಅಸಲಿ ಮಾಲೀಕರಾದ ಶ್ಯಾಮಲಾ ಹಾಗೂ ಇಂದ್ರಮ್ಮ ಅವರೆಂದು ಬಿಂಬಿಸಿ, ಅವರ ಹೆಸರಿನಲ್ಲಿ ಪಾನ್ಕಾರ್ಡ್, ಆಧಾರ್ ಕಾರ್ಡ್ ಮತ್ತು ಇತರೆ ದಾಖಲಾತಿಗಳನ್ನು ಸೃಷ್ಟಿಸುತ್ತಾರೆ. ನಂತರ, ಈ ಜಮೀನನನ್ನು ಹಲವು ಮಂದಿಗೆ ಮಾರಾಟ ಮಾಡುತ್ತಾರೆ. ಜತೆಗೆ, ಆಂಧ್ರಪ್ರದೇಶದ ಕಡೂರಿನ ವಸುಮತಮ್ಮ ಮತ್ತು ಕಾಶಿರೆಡ್ಡಿ, ವೇದಾವತಿ ಎಂಬುವವರೊಂದಿಗೆ ಎಸ್ಬಿಐ ನೆಲ್ಲೂರು ಶಾಖೆಯಲ್ಲಿ ಒಟ್ಟು ₹ 4 ಕೋಟಿ ಸಾಲ ಪಡೆದುಕೊಂಡಿರುತ್ತಾರೆ.</p>.<p>ಸಾಲ ಪಾವತಿಸದೇ ಇದ್ದಾಗ ಮೂಲ ‘ಜಿಪಿಎ’ ಹೊಂದಿದ ಮಹೇಶ್ ಅವರಿಗೆ ಬ್ಯಾಂಕಿನಿಂದ ನೋಟಿಸ್ ಬರುತ್ತದೆ. ಆಗ ಬೆಚ್ಚಿಬಿದ್ದ ಇವರು ಅಶೋಕಪುರಂ ಠಾಣೆಗೆ ದೂರು ನೀಡುತ್ತಾರೆ.</p>.<p>ಕೃಷ್ಣರಾಜ ವಿಭಾಗದ ಎಸಿಪಿ ಪೂರ್ಣಚಂದ್ರ ತೇಜಸ್ವಿ ಅವರು ಪ್ರಕರಣದ ತನಿಖೆಯ ಹೊಣೆಯನ್ನು ಇನ್ಸ್ಪೆಕ್ಟರ್ ಬಿ.ಎಸ್.ಪ್ರಕಾಶ್ ಅವರಿಗೆ ವಹಿಸುತ್ತಾರೆ. ತನಿಖೆ ಕೈಗೊಂಡ ಪೊಲೀಸರು ಆಂಧ್ರಪ್ರದೇಶಕ್ಕೆ ತೆರಳಿ ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>ಕಾರ್ಯಾಚರಣೆ ತಂಡದಲ್ಲಿ ಮಹದೇವಯ್ಯ, ಆನಂದ್, ರಾಘವೇಂದ್ರ, ಶಿವಪ್ರಕಾಶ್, ಮಹೇಶ್, ಸಂದೀಪ್, ನಿತೀಶ್, ಶೈಲಾಜು, ವಸಂತ ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>