<p><strong>ಮೈಸೂರು:</strong> ಮೈಸೂರು ನಗರದಲ್ಲಿ ವಾರದಿಂದ ಈಚೆಗೆ 15ಕ್ಕೂ ಹೆಚ್ಚು ಕೋಳಿ, ಕೊಕ್ಕರೆಗಳು ಮೃತಪಟ್ಟಿದ್ದು, ಹಕ್ಕಿಜ್ವರದ ಆತಂಕ ನಿರ್ಮಾಣವಾಗಿದೆ.</p>.<p>ಮೇಟಗಳ್ಳಿ ನಿವಾಸಿ ರಾಮಣ್ಣ ಎಂಬುವವರ ಮನೆಯಲ್ಲಿ ಸಾಕಿದ್ದ 10 ಕೋಳಿಗಳು ಎರಡು ದಿನಗಳ ಅಂತರದಲ್ಲಿ ಸತ್ತಿರುವ ವಿಚಾರವನ್ನು ಸ್ಥಳೀಯರು ಪಾಲಿಕೆ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅಸ್ವಸ್ಥಗೊಂಡಿದ್ದ ಒಂದು ಕೋಳಿಯನ್ನು ಅಧಿಕಾರಿಗಳು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ತೆಗೆದುಕೊಂಡು ಹೋಗಿದ್ದಾರೆ.</p>.<p>‘ಅಸ್ವಸ್ಥ ಕೋಳಿಯನ್ನು ಪರೀಕ್ಷಿಸಿದಾಗ ಮೇಲ್ನೋಟಕ್ಕೆ ಕೊಕ್ಕರೆ ರೋಗದ ಲಕ್ಷಣ ಕಂಡುಬರುತ್ತಿದೆ. ಇದಕ್ಕೂ ಹಕ್ಕಿಜ್ವರಕ್ಕೂ ಸಂಬಂಧವಿಲ್ಲ. ಹೀಗಾಗಿ, ಆತಂಕಪಡುವ ಅಗತ್ಯವಿಲ್ಲ. ಗಡಿಭಾಗದ 9 ಚೆಕ್ಪೋಸ್ಟ್ಗಳಲ್ಲಿ ನಿಗಾ ಇಡಲಾಗಿದೆ’ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಅಜಿತ್ ಕುಮಾರ್ ಹೇಳಿದರು.</p>.<p>ವಿದ್ಯಾರಣ್ಯಪುರಂ ವ್ಯಾಪ್ತಿಯಲ್ಲಿ ಆರು ಹಾಗೂ ಹೆಬ್ಬಾಳ ವ್ಯಾಪ್ತಿಯಲ್ಲಿ ಎರಡು ಕೊಕ್ಕರೆ ಮೃತಪಟ್ಟಿವೆ. ಇವುಗಳ ಅಂಗಾಂಗ ಮಾದರಿಯನ್ನು ಬೆಂಗಳೂರಿನ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.</p>.<p>ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿರುವ ಕಾರಣ, ಇಲ್ಲಿನ ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿಕೆರೆಯಲ್ಲೂ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಮೈಸೂರು ನಗರದಲ್ಲಿ ವಾರದಿಂದ ಈಚೆಗೆ 15ಕ್ಕೂ ಹೆಚ್ಚು ಕೋಳಿ, ಕೊಕ್ಕರೆಗಳು ಮೃತಪಟ್ಟಿದ್ದು, ಹಕ್ಕಿಜ್ವರದ ಆತಂಕ ನಿರ್ಮಾಣವಾಗಿದೆ.</p>.<p>ಮೇಟಗಳ್ಳಿ ನಿವಾಸಿ ರಾಮಣ್ಣ ಎಂಬುವವರ ಮನೆಯಲ್ಲಿ ಸಾಕಿದ್ದ 10 ಕೋಳಿಗಳು ಎರಡು ದಿನಗಳ ಅಂತರದಲ್ಲಿ ಸತ್ತಿರುವ ವಿಚಾರವನ್ನು ಸ್ಥಳೀಯರು ಪಾಲಿಕೆ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅಸ್ವಸ್ಥಗೊಂಡಿದ್ದ ಒಂದು ಕೋಳಿಯನ್ನು ಅಧಿಕಾರಿಗಳು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ತೆಗೆದುಕೊಂಡು ಹೋಗಿದ್ದಾರೆ.</p>.<p>‘ಅಸ್ವಸ್ಥ ಕೋಳಿಯನ್ನು ಪರೀಕ್ಷಿಸಿದಾಗ ಮೇಲ್ನೋಟಕ್ಕೆ ಕೊಕ್ಕರೆ ರೋಗದ ಲಕ್ಷಣ ಕಂಡುಬರುತ್ತಿದೆ. ಇದಕ್ಕೂ ಹಕ್ಕಿಜ್ವರಕ್ಕೂ ಸಂಬಂಧವಿಲ್ಲ. ಹೀಗಾಗಿ, ಆತಂಕಪಡುವ ಅಗತ್ಯವಿಲ್ಲ. ಗಡಿಭಾಗದ 9 ಚೆಕ್ಪೋಸ್ಟ್ಗಳಲ್ಲಿ ನಿಗಾ ಇಡಲಾಗಿದೆ’ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಅಜಿತ್ ಕುಮಾರ್ ಹೇಳಿದರು.</p>.<p>ವಿದ್ಯಾರಣ್ಯಪುರಂ ವ್ಯಾಪ್ತಿಯಲ್ಲಿ ಆರು ಹಾಗೂ ಹೆಬ್ಬಾಳ ವ್ಯಾಪ್ತಿಯಲ್ಲಿ ಎರಡು ಕೊಕ್ಕರೆ ಮೃತಪಟ್ಟಿವೆ. ಇವುಗಳ ಅಂಗಾಂಗ ಮಾದರಿಯನ್ನು ಬೆಂಗಳೂರಿನ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.</p>.<p>ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿರುವ ಕಾರಣ, ಇಲ್ಲಿನ ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿಕೆರೆಯಲ್ಲೂ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>