<p><strong>ಮೈಸೂರು</strong>: ಗೃಹ ಸಚಿವ ಎಂ.ಬಿ.ಪಾಟೀಲ ವಿರುದ್ಧ ಬಿಜೆಪಿ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಸಚಿವರು ಹಾಗೂ ಸಮ್ಮಿಶ್ರ ಸರ್ಕಾರ ಮಾಧ್ಯಮಗಳೂ ಸೇರಿದಂತೆ ರಾಜಕೀಯ ಎದುರಾಳಿಗಳನ್ನು ಹತ್ತಿಕ್ಕಲು ಸೇಡಿನ ಕ್ರಮಗಳನ್ನು ಕೈಗೊಳ್ಳುತ್ತಿವೆ. ಬಿಜೆಪಿ ನೀಡಿದ ದೂರುಗಳನ್ನು ಪರಿಗಿಸುತ್ತಿಲ್ಲ ಎಂದು ಕಿಡಿಕಾರಿದರು.</p>.<p>ಮಹೇಶ್ ವಿಕ್ರಂ ಹೆಗ್ಡೆ, ಶ್ರುತಿ ಬೆಳ್ಳಕ್ಕಿ, ಶಾರದಾ ಡೈಮಂಡ್, ಹೇಮಂತಕುಮಾರ್ ಮತ್ತು ಅಜಿತ್ಶೆಟ್ಟಿ ಹೇರಂಜಿ ಸೇರಿದಂತೆ ಹಲವರ ಮೇಲೆ ನಿರಾಧಾರ ಪ್ರಕರಣಗಳನ್ನು ದಾಖಲಿಸಿ ಮಾನಸಿಕ ಕಿರುಕುಳ ನೀಡಲಾಗುತ್ತಿದೆ ಎಂದು ಅವರು ಆರೋಪಿಸಿದರು.</p>.<p>ಇವರೆಲ್ಲರೂ ಬಿಜೆಪಿ ಕುರಿತು ಅಭಿಮಾನ ಹೊಂದಿರುವುದೇ ತಪ್ಪು ಎಂಬಂತೆ ಅವರ ಮೇಲೆ ಸೇಡಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇವರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಸಂಪೂರ್ಣವಾಗಿ ಹತ್ತಿಕ್ಕಲಾಗಿದೆ ಎಂದು ಹೇಳಿದರು.</p>.<p>ಹಲವು ಪ್ರಕರಣಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬಿಜೆಪಿ ಕಾರ್ಯಕರ್ತರ ವಿರುದ್ಧ ಐಪಿಸಿ ಸೆಕ್ಷನ್ 307ರ ಪ್ರಕಾರ ಪ್ರಕರಣಗಳು ದಾಖಲಾಗಿದ್ದರೂ ಕೇವಲ ಬಿಜೆಪಿ ಕಾರ್ಯಕರ್ತರನ್ನು ಮತ್ತು ಅಭಿಮಾನಿಗಳನ್ನು ಬಂಧಿಸಲಾಗಿದೆ. ರಾಜಕೀಯ ದ್ವೇಷದ ಕ್ರಮಕ್ಕೆ ಪೊಲೀಸ್ ವ್ಯವಸ್ಥೆಯ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ನಡೆಯುತ್ತಿದ್ದರೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮೌನಕ್ಕೆ ಶರಣಾಗಿದ್ದಾರೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಎಲ್ಲರ ಹಕ್ಕು, ಸ್ವಾತಂತ್ರ್ಯವನ್ನು ರಕ್ಷಿಸುವ ಜವಾಬ್ದಾರಿಯನ್ನು ನಿಭಾಯಿಸುವಂತೆ ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಬೇಕು ಎಂದು ಅವರು ಆಗ್ರಹಿಸಿದರು. ಬಳಿಕ ಜಿಲ್ಲಾಧಿಕಾರಿಗೆ ಮುಖಂಡರು ಮನವಿ ಸಲ್ಲಿಸಿದರು.</p>.<p>ಬಿಜೆಪಿಯ ಜಿಲ್ಲಾ ಘಟಕದ ಅಧ್ಯಕ್ಷ ಕೋಟೆ ಎಂ.ಶಿವಣ್ಣ, ಮುಖಂಡರಾದ ರಘು ಕೌಟಿಲ್ಯ, ಹೇಮಂತಕುಮಾರ್ಗೌಡ, ಬಿ.ವಿ.ಮಂಜುನಾಥ್, ಎಸ್.ಸತೀಶ್ ಹಾಗೂ ಪಕ್ಷದ ಪಾಲಿಕೆ ಸದಸ್ಯರು ಮತ್ತು ಕಾರ್ಯಕರ್ತರು ಪ್ರತಿಭಟನೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಗೃಹ ಸಚಿವ ಎಂ.ಬಿ.ಪಾಟೀಲ ವಿರುದ್ಧ ಬಿಜೆಪಿ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಸಚಿವರು ಹಾಗೂ ಸಮ್ಮಿಶ್ರ ಸರ್ಕಾರ ಮಾಧ್ಯಮಗಳೂ ಸೇರಿದಂತೆ ರಾಜಕೀಯ ಎದುರಾಳಿಗಳನ್ನು ಹತ್ತಿಕ್ಕಲು ಸೇಡಿನ ಕ್ರಮಗಳನ್ನು ಕೈಗೊಳ್ಳುತ್ತಿವೆ. ಬಿಜೆಪಿ ನೀಡಿದ ದೂರುಗಳನ್ನು ಪರಿಗಿಸುತ್ತಿಲ್ಲ ಎಂದು ಕಿಡಿಕಾರಿದರು.</p>.<p>ಮಹೇಶ್ ವಿಕ್ರಂ ಹೆಗ್ಡೆ, ಶ್ರುತಿ ಬೆಳ್ಳಕ್ಕಿ, ಶಾರದಾ ಡೈಮಂಡ್, ಹೇಮಂತಕುಮಾರ್ ಮತ್ತು ಅಜಿತ್ಶೆಟ್ಟಿ ಹೇರಂಜಿ ಸೇರಿದಂತೆ ಹಲವರ ಮೇಲೆ ನಿರಾಧಾರ ಪ್ರಕರಣಗಳನ್ನು ದಾಖಲಿಸಿ ಮಾನಸಿಕ ಕಿರುಕುಳ ನೀಡಲಾಗುತ್ತಿದೆ ಎಂದು ಅವರು ಆರೋಪಿಸಿದರು.</p>.<p>ಇವರೆಲ್ಲರೂ ಬಿಜೆಪಿ ಕುರಿತು ಅಭಿಮಾನ ಹೊಂದಿರುವುದೇ ತಪ್ಪು ಎಂಬಂತೆ ಅವರ ಮೇಲೆ ಸೇಡಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇವರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಸಂಪೂರ್ಣವಾಗಿ ಹತ್ತಿಕ್ಕಲಾಗಿದೆ ಎಂದು ಹೇಳಿದರು.</p>.<p>ಹಲವು ಪ್ರಕರಣಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬಿಜೆಪಿ ಕಾರ್ಯಕರ್ತರ ವಿರುದ್ಧ ಐಪಿಸಿ ಸೆಕ್ಷನ್ 307ರ ಪ್ರಕಾರ ಪ್ರಕರಣಗಳು ದಾಖಲಾಗಿದ್ದರೂ ಕೇವಲ ಬಿಜೆಪಿ ಕಾರ್ಯಕರ್ತರನ್ನು ಮತ್ತು ಅಭಿಮಾನಿಗಳನ್ನು ಬಂಧಿಸಲಾಗಿದೆ. ರಾಜಕೀಯ ದ್ವೇಷದ ಕ್ರಮಕ್ಕೆ ಪೊಲೀಸ್ ವ್ಯವಸ್ಥೆಯ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ನಡೆಯುತ್ತಿದ್ದರೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮೌನಕ್ಕೆ ಶರಣಾಗಿದ್ದಾರೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಎಲ್ಲರ ಹಕ್ಕು, ಸ್ವಾತಂತ್ರ್ಯವನ್ನು ರಕ್ಷಿಸುವ ಜವಾಬ್ದಾರಿಯನ್ನು ನಿಭಾಯಿಸುವಂತೆ ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಬೇಕು ಎಂದು ಅವರು ಆಗ್ರಹಿಸಿದರು. ಬಳಿಕ ಜಿಲ್ಲಾಧಿಕಾರಿಗೆ ಮುಖಂಡರು ಮನವಿ ಸಲ್ಲಿಸಿದರು.</p>.<p>ಬಿಜೆಪಿಯ ಜಿಲ್ಲಾ ಘಟಕದ ಅಧ್ಯಕ್ಷ ಕೋಟೆ ಎಂ.ಶಿವಣ್ಣ, ಮುಖಂಡರಾದ ರಘು ಕೌಟಿಲ್ಯ, ಹೇಮಂತಕುಮಾರ್ಗೌಡ, ಬಿ.ವಿ.ಮಂಜುನಾಥ್, ಎಸ್.ಸತೀಶ್ ಹಾಗೂ ಪಕ್ಷದ ಪಾಲಿಕೆ ಸದಸ್ಯರು ಮತ್ತು ಕಾರ್ಯಕರ್ತರು ಪ್ರತಿಭಟನೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>