‘ಇಂತಹ ಮೂರ್ಖರಿಗೆ ಧರ್ಮ ಗೊತ್ತಿಲ್ಲ, ದೇವರು ಗೊತ್ತಿಲ್ಲ. ಇವರಿಗೆ ಸಮಾಜದ ಬಗ್ಗೆ ಕಿಂಚಿತ್ ಕಾಳಜಿ ಇರುವುದಿಲ್ಲ. ಇವರಿಗೆ ಕೇವಲ ಕೋಮುವಾದಿ ರಾಜಕೀಯ ಪಕ್ಷವೊಂದರ ಹಿತ ಮುಖ್ಯವಾಗಿದೆಯೇ ಹೊರತು ಎಂದಿಗೂ ಸಹ ಧಾರ್ಮಿಕ ಸಾಮರಸ್ಯ, ಸಂವಿಧಾನಾತ್ಮಕ, ಪ್ರಜಾಸತ್ತಾತ್ಮಕ ವಾತಾವರಣ ಮುಖ್ಯವಾಗಿರಲ್ಲ. ಆದರೆ, ಬಾಬಾ ಸಾಹೇಬರ ನೆಲದಲ್ಲಿ ಹುಟ್ಟಿ, ಅವರ ಆಲೋಚನೆಯಿಂದಲೇ ಪ್ರಭಾವಿತರಾದ ನಾವು, ಈ ಮನುವಾದಿ ಧಾರ್ಮಿಕ ಮತ್ತು ರಾಜಕೀಯ ಹುಚ್ಚರ ಕುತಂತ್ರಗಳಿಗೆ ಮನ್ನಣೆ ಕೊಡುವುದಿಲ್ಲ ಎಂದು ಈ ಮೂಲಕ ಸ್ಪಷ್ಟ ಪಡಿಸುತ್ತೇನೆ’ ಎಂದು ಮಹದೇವಪ್ಪ ತಮ್ಮ ಟ್ವೀಟ್ನಲ್ಲಿ ಹೇಳಿಕೊಂಡಿದ್ದಾರೆ.