ಬಿ.ಎಸ್.ಯಡಿಯೂರಪ್ಪ ಅವರ ಬೆನ್ನಿಗೆ ಅವರೆ ಕರೆದುಕೊಂಡು ಬಂದ ಶಾಸಕರು, ಮಠಾಧೀಶರು, ರಾಜ್ಯದಲ್ಲಿ ಪ್ರಬಲವಾಗಿದ್ದ ಸಮುದಾಯ ಇತ್ತು. ಆದರೂ, ಹೈಕಮಾಂಡ್ ಹೇಳಿದ ತಕ್ಷಣ ರಾಜೀನಾಮೆ ನೀಡಿ ತಮ್ಮ ನಿಯತ್ತನ್ನು ಪ್ರದರ್ಶಿಸಿದ್ದಾರೆ. ಅವರನ್ನು ನೋಡಿಯಾದರೂ ಮಹೇಶ್ ಕಲಿಯಬೇಕು ಎಂದು ಅವರು ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಚಾಟಿ ಬೀಸಿದರು.