ಮೈಸೂರು: ‘ಶಾಂತಿ ಸುವ್ಯವಸ್ಥೆ ದೃಷ್ಟಿಯಿಂದ ಕಾಂಗ್ರೆಸ್ ಕೊಡಗಿನಲ್ಲಿ ಪಾದಯಾತ್ರೆಯನ್ನು ಕೈಬಿಟ್ಟಿರುವುದು ಸ್ವಾಗತಾರ್ಹ ಕ್ರಮವಾಗಿದೆ’ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದರು.
‘ಶಾಂತ ವಾತಾವರಣವಿದ್ದಾಗ ಕಾರ್ಯಕ್ರಮ ನಡೆಸಲಿ. ಕಾಂಗ್ರೆಸ್ ನಾಯಕರು ಒಳ್ಳೆಯ ತೀರ್ಮಾನ ತೆಗೆದುಕೊಂಡಿದ್ದಾರೆ. ಬಿಜೆಪಿ ಕೂಡ ಯಾವುದೇ ಕಾರ್ಯಕ್ರಮ ನಡೆಸುವುದಿಲ್ಲ. ಈಗಾಗಲೇ ಕಾರ್ಯಕರ್ತರಿಗೆ ಸೂಚಿಸಲಾಗಿದೆ’ ಎಂದು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.