‘ನಾನು ಕುರುಕ್ಷೇತ್ರದ ಅಭಿಮನ್ಯು ಆಗಲು ಸಿದ್ದ. ಆದರೆ ನಾನು ಅರ್ಜುನನಾಗುತ್ತೇನೆ. ವನವಾಸ, ಅಜ್ಞಾತವಾಸ ಎಲ್ಲಾ ಮುಗಿದಿದೆ. ಇನ್ನೇನಿದ್ದರೂ ಪಟ್ಟಾಭಿಷೇಕ ಮಾಡಿಸುವ ಕೆಲಸ ಅಷ್ಟೇ. ನನಗೆ ವಿಶ್ವಾಸವಿದೆ ನಾಯಕತ್ವ ಬದಲಾಗುತ್ತದೆ. ನಾನು ಏಕಾಂಗಿ ಅಲ್ಲ. ಸಾಕಷ್ಟು ಸಚಿವರು ನನ್ನ ಸಂಪರ್ಕದಲ್ಲಿದ್ದಾರೆ. ಎಲ್ಲರೂ ನೀವು ಮಾಡುತ್ತಿರುವುದು ನ್ಯಾಯಯುತ ಹೋರಾಟ ಎಂದು ಹೋರಾಟ ಮುಂದವರಿಸಲು ಹೇಳಿದ್ದಾರೆ. ಕೆಲವೇ ದಿನಗಳಲ್ಲಿ ಇದರ ಫಲ ಸಿಗುತ್ತದೆ. ಯಡಿಯೂರಪ್ಪ ಕುರಿತು ಭ್ರಷ್ಟಾಚಾರದ ದಾಖಲೆ ಶೀಘ್ರದಲ್ಲೇ ಬಿಡುಗಡೆ ಮಾಡುತ್ತೇನೆ’ ಎಂದರು.