<p><strong>ಮೈಸೂರು:</strong> ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನನಗೆ ಯಾವ ಖಾತೆ ಬೇಕು ಎಂದು ಕೇಳಿದರೆ ಬೆಂಗಳೂರು ನಗರಾಭಿವೃದ್ಧಿ ಖಾತೆ ಮತ್ತು ಬೆಂಗಳೂರು ಉಸ್ತುವಾರಿ ಸ್ಥಾನ ಬೇಕು ಎಂದು ಕೇಳುತ್ತೇನೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.</p>.<p>ಸಂಸದ ವಿ.ಶ್ರೀನಿವಾಸಪ್ರಸಾದ್ ಅವರ ಜನ್ಮದಿನದ ಪ್ರಯುಕ್ತ ಇಲ್ಲಿನ ಅವರ ನಿವಾಸಕ್ಕೆ ಶುಕ್ರವಾರ ಭೇಟಿ ನೀಡಿದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಬಿಬಿಎಂಪಿ ಚುನಾವಣೆ ಹಿನ್ನಲೆಯಲ್ಲಿ ಈ ಖಾತೆ ನನಗೆ ಅಗತ್ಯವಿದೆ. ಆದರೆ ಮುಖ್ಯಮಂತ್ರಿ ಯಾವ ಖಾತೆ ಬೇಕು ಎಂದು ಕೇಳುವುದಿಲ್ಲ, ನಾನೂ ಹೇಳುವುದಿಲ್ಲ ಎಂಬುದೂ ನನಗೆ ಗೊತ್ತಿದೆ. ಸುದ್ದಿಗಾರರು ಕೇಳುತ್ತಿರುವುದರಿಂದ, ನಾನು ಈಗ ಹೇಳುತ್ತಿದ್ದೇನೆ ಎಂದರು.</p>.<p><strong>ಇದನ್ನೂ ಓದಿ:</strong> <a href="https://www.prajavani.net/district/mysore/v-srinivas-prasad-declared-retirement-from-election-politics-mysuru-855177.html">ಚುನಾವಣಾ ರಾಜಕಾರಣದಿಂದ ನಿವೃತ್ತಿ ಘೋಷಿಸಿದ ವಿ.ಶ್ರೀನಿವಾಸಪ್ರಸಾದ್ | Prajavani</a></p>.<p>ಮೈಸೂರಿನ ಪ್ರವಾಸಿ ತಾಣಗಳು ತೆರೆದಿರಬೇಕೋ ಅಥವಾ ಮುಚ್ಚಬೇಕೋ ಎಂಬುದರ ಕುರಿತು ಆಗಸ್ಟ್ 7 ರ ಮಧ್ಯಾಹ್ನದ ಒಳಗಡೆ ಈ ಬಗ್ಗೆ ಸಂಪೂರ್ಣ ವರದಿ ಕೊಡುವಂತೆ ಜಿಲ್ಲಾಡಳಿತಕ್ಕೆ ಕೇಳಿದ್ದೇನೆ. ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡಿ ಅಂತಿಮ ನಿರ್ಧಾರ ಪ್ರಕಟಿಸಲಾಗುವುದು ಎಂದು ತಿಳಿಸಿದರು.</p>.<p>ಲಾಕ್ಡೌನ್ನಿಂದ ಜನರಿಗೆ ತೊಂದರೆಯಾಗಿದೆ. ಹೀಗಾಗಿ ಸಂಪೂರ್ಣ ಮುಚ್ಚುವುದು ಕಷ್ಟ. ಜನರಿಗೂ ತೊಂದರೆಯಾಗದಂತೆ, ವ್ಯಾಪಾರಿಗಳಿಗೂ ತೊಂದರೆಯಾಗದಂತೆ ಎಲ್ಲರಿಗೂ ಅನುಕೂಲವಾಗುವ ರೀತಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನನಗೆ ಯಾವ ಖಾತೆ ಬೇಕು ಎಂದು ಕೇಳಿದರೆ ಬೆಂಗಳೂರು ನಗರಾಭಿವೃದ್ಧಿ ಖಾತೆ ಮತ್ತು ಬೆಂಗಳೂರು ಉಸ್ತುವಾರಿ ಸ್ಥಾನ ಬೇಕು ಎಂದು ಕೇಳುತ್ತೇನೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.</p>.<p>ಸಂಸದ ವಿ.ಶ್ರೀನಿವಾಸಪ್ರಸಾದ್ ಅವರ ಜನ್ಮದಿನದ ಪ್ರಯುಕ್ತ ಇಲ್ಲಿನ ಅವರ ನಿವಾಸಕ್ಕೆ ಶುಕ್ರವಾರ ಭೇಟಿ ನೀಡಿದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಬಿಬಿಎಂಪಿ ಚುನಾವಣೆ ಹಿನ್ನಲೆಯಲ್ಲಿ ಈ ಖಾತೆ ನನಗೆ ಅಗತ್ಯವಿದೆ. ಆದರೆ ಮುಖ್ಯಮಂತ್ರಿ ಯಾವ ಖಾತೆ ಬೇಕು ಎಂದು ಕೇಳುವುದಿಲ್ಲ, ನಾನೂ ಹೇಳುವುದಿಲ್ಲ ಎಂಬುದೂ ನನಗೆ ಗೊತ್ತಿದೆ. ಸುದ್ದಿಗಾರರು ಕೇಳುತ್ತಿರುವುದರಿಂದ, ನಾನು ಈಗ ಹೇಳುತ್ತಿದ್ದೇನೆ ಎಂದರು.</p>.<p><strong>ಇದನ್ನೂ ಓದಿ:</strong> <a href="https://www.prajavani.net/district/mysore/v-srinivas-prasad-declared-retirement-from-election-politics-mysuru-855177.html">ಚುನಾವಣಾ ರಾಜಕಾರಣದಿಂದ ನಿವೃತ್ತಿ ಘೋಷಿಸಿದ ವಿ.ಶ್ರೀನಿವಾಸಪ್ರಸಾದ್ | Prajavani</a></p>.<p>ಮೈಸೂರಿನ ಪ್ರವಾಸಿ ತಾಣಗಳು ತೆರೆದಿರಬೇಕೋ ಅಥವಾ ಮುಚ್ಚಬೇಕೋ ಎಂಬುದರ ಕುರಿತು ಆಗಸ್ಟ್ 7 ರ ಮಧ್ಯಾಹ್ನದ ಒಳಗಡೆ ಈ ಬಗ್ಗೆ ಸಂಪೂರ್ಣ ವರದಿ ಕೊಡುವಂತೆ ಜಿಲ್ಲಾಡಳಿತಕ್ಕೆ ಕೇಳಿದ್ದೇನೆ. ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡಿ ಅಂತಿಮ ನಿರ್ಧಾರ ಪ್ರಕಟಿಸಲಾಗುವುದು ಎಂದು ತಿಳಿಸಿದರು.</p>.<p>ಲಾಕ್ಡೌನ್ನಿಂದ ಜನರಿಗೆ ತೊಂದರೆಯಾಗಿದೆ. ಹೀಗಾಗಿ ಸಂಪೂರ್ಣ ಮುಚ್ಚುವುದು ಕಷ್ಟ. ಜನರಿಗೂ ತೊಂದರೆಯಾಗದಂತೆ, ವ್ಯಾಪಾರಿಗಳಿಗೂ ತೊಂದರೆಯಾಗದಂತೆ ಎಲ್ಲರಿಗೂ ಅನುಕೂಲವಾಗುವ ರೀತಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>