ಮೈಸೂರು: ವಿಧಾನಸಭೆಯಲ್ಲಿ ಸಮ್ಮಿಶ್ರ ಸರ್ಕಾರ ವಿಶ್ವಾಸ ಮತ ಕಳೆದುಕೊಂಡು, ಪತನಗೊಂಡಿದ್ದರಿಂದ ಬಿಜೆಪಿ ಕಾರ್ಯಕರ್ತರು ಮಂಗಳವಾರ ರಾತ್ರಿ ನಗರವೂ ಸೇರಿದಂತೆ ಜಿಲ್ಲೆಯ ವಿವಿಧೆಡೆ ಸಂಭ್ರಮಾಚರಣೆ ನಡೆಸಿದರು.
ಬಿ.ಎಸ್.ಯಡಿಯೂರಪ್ಪ ಅಭಿಮಾನಿ ಬಳಗದ ಸದಸ್ಯರು ಮೈಸೂರಿನ ಚಾಮುಂಡಿಪುರಂ ವೃತ್ತದಲ್ಲಿ ಜಮಾಯಿಸಿ ಬಿಎಸ್ವೈ ಪೋಸ್ಟರ್ಗಳನ್ನಿಡಿದು ಜಯಘೋಷ ಮೊಳಗಿಸಿದರು. ಬಿಜೆಪಿ ಕಾರ್ಯಕರ್ತರು ಸಾಥ್ ನೀಡಿದರು. ಪರಸ್ಪರರು ಸಿಹಿ ಹಂಚಿಕೊಂಡು ಸಂಭ್ರಮಿಸಿದರು.
ಬಿಜೆಪಿ ಯುವ ಮುಖಂಡ ಕಡಕೋಳ ಜಗದೀಶ್, ವಿಕ್ರಂ ಅಯ್ಯಂಗಾರ್, ಕೆ.ಎಂ.ನಿಶಾಂತ್, ಲೋಹಿತ್, ರಂಗನಾಥ್, ಸುಚೀಂದ್ರ, ಚಕ್ರಪಾಣಿ, ಜಯಸಿಂಹ, ಶ್ರೀಧರ್, ನವೀನ್ ಶೆಟ್ಟಿ ಸೇರಿದಂತೆ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು.