ಕೊಡಗು ಹಾಗೂ ಕೇರಳದಲ್ಲಿ ಪ್ರವಾಹ ಉಂಟಾಗಿದ್ದ ಕಾರಣ ಪ್ರವಾಸೋದ್ಯಮಕ್ಕೆ ಹೊಡೆತ ಬಿದ್ದಿರುವುದು ದಸರೆಯ ಮೇಲೂ ಪ್ರಭಾವ ಬೀರಲಿದೆ. ಹಾಗಾಗಿ, ಪ್ರವಾಸಿಗರ ಸಂಖ್ಯೆ ಕಡಿಮೆಯಾಗುವ ಅಂದಾಜಿದೆ. ದಸರೆಗೆಂದು ಮೈಸೂರಿಗೆ ಬರುವ ಅನೇಕ ಪ್ರವಾಸಿಗರು ಸಾಮಾನ್ಯವಾಗಿ ಕೊಡಗಿಗೂ ಪ್ರವಾಸಕ್ಕೆ ತೆರಳುತ್ತಾರೆ. ಆದರೆ, ಈಗ ಕೊಡಗು ಸಾಕಷ್ಟು ಹಾನಿಗೆ ಒಳಗಾಗಿರುವ ಕಾರಣ ಹಾಗೂ ಪ್ರತಿಕೂಲ ವಾತಾವರಣದ ಸಲುವಾಗಿ ಅಲ್ಲಿಗೆ ತೆರಳುವುದು ಅಸಾಧ್ಯವಾಗಿದೆ. ಈ ಕಾರಣದಿಂದ ದಸರೆಗೂ ಪ್ರವಾಸಿಗರು ಕಡಿಮೆಯಾಗಬಹುದು ಎಂಬ ನಿರೀಕ್ಷೆಯಲ್ಲಿ, ಪರ್ಯಾಯ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡ ಹೊರಟಿದೆ.