<p>ಮೈಸೂರು: ಇಲ್ಲಿನ ಮಾನಸ ಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಬಿ.ಎಂ.ಶ್ರೀ. ಸಭಾಂಗಣದಲ್ಲಿ ‘ಅಮೃತ ಪುಸ್ತಕ ಮಾರಾಟ ಅಭಿಯಾನ’ ಮತ್ತು ಸಾಕ್ಷ್ಯಚಿತ್ರ ಪ್ರದರ್ಶನ ಬುಧವಾರ ನಡೆಯಿತು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸಾಹಿತ್ಯ ಅಕಾಡೆಮಿ ಮತ್ತು ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಸಹಯೋಗದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ‘ಅಮೃತ ಭಾರತಿಗೆ ಕನ್ನಡದಾರತಿ’ ಅಭಿಯಾನದ ನಿಮಿತ್ತ ಕಾರ್ಯಕ್ರಮ ಆಯೋಜಿಸಲಾಗಿತ್ತು.</p>.<p>ಸ್ವಾತಂತ್ರ್ಯ ಚಳವಳಿಯನ್ನು ಬಿಂಬಿಸುವ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕಿ ಡಾ.ವಿಜಯಕುಮಾರಿ ಎಸ್.ಕರಿಕಲ್ ಚಾಲನೆ ನೀಡಿದರು. ಪುಸ್ತಕ ಮಾರಾಟವನ್ನು ಪ್ರಾಧ್ಯಾಪಕ ಡಾ.ಎನ್.ಡಿ.ಶಶಿಕಲಾ ಉದ್ಘಾಟಿಸಿದರು.</p>.<p>ಪುಸ್ತಕಗಳನ್ನು ಶೇ.50ರಷ್ಟು ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಇಡಲಾಗಿತ್ತು.</p>.<p>ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯೆ ಡಾ.ವೈ.ಸಿ.ಭಾನುಮತಿ ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಇಲ್ಲಿನ ಮಾನಸ ಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಬಿ.ಎಂ.ಶ್ರೀ. ಸಭಾಂಗಣದಲ್ಲಿ ‘ಅಮೃತ ಪುಸ್ತಕ ಮಾರಾಟ ಅಭಿಯಾನ’ ಮತ್ತು ಸಾಕ್ಷ್ಯಚಿತ್ರ ಪ್ರದರ್ಶನ ಬುಧವಾರ ನಡೆಯಿತು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸಾಹಿತ್ಯ ಅಕಾಡೆಮಿ ಮತ್ತು ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಸಹಯೋಗದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ‘ಅಮೃತ ಭಾರತಿಗೆ ಕನ್ನಡದಾರತಿ’ ಅಭಿಯಾನದ ನಿಮಿತ್ತ ಕಾರ್ಯಕ್ರಮ ಆಯೋಜಿಸಲಾಗಿತ್ತು.</p>.<p>ಸ್ವಾತಂತ್ರ್ಯ ಚಳವಳಿಯನ್ನು ಬಿಂಬಿಸುವ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕಿ ಡಾ.ವಿಜಯಕುಮಾರಿ ಎಸ್.ಕರಿಕಲ್ ಚಾಲನೆ ನೀಡಿದರು. ಪುಸ್ತಕ ಮಾರಾಟವನ್ನು ಪ್ರಾಧ್ಯಾಪಕ ಡಾ.ಎನ್.ಡಿ.ಶಶಿಕಲಾ ಉದ್ಘಾಟಿಸಿದರು.</p>.<p>ಪುಸ್ತಕಗಳನ್ನು ಶೇ.50ರಷ್ಟು ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಇಡಲಾಗಿತ್ತು.</p>.<p>ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯೆ ಡಾ.ವೈ.ಸಿ.ಭಾನುಮತಿ ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>