‘ಚಂದ್ರಶೇಖರ್ ಅವರ ಪೋಷಕರೊಂದಿಗೆ ಸಮಾಲೋಚನೆ ನಡೆಸಿ ಅಂಗಾಂಗ ದಾನಕ್ಕೆ ಸಮ್ಮತಿ ಪಡೆಯಲಾಯಿತು. ಮಂಗಳವಾರ ಬೆಳಿಗ್ಗೆ 7ರಲ್ಲಿ ಅಂಗಾಂಗಳನ್ನು ಹೊರತೆಗೆಯಲಾಯಿತು. ಗ್ರೀನ್ ಕಾರಿಡಾರ್ ಹಾಗೂ ಶೂನ್ಯ ಸಂಚಾರದ ಮೂಲಕ ವಿವಿಧ ಆಸ್ಪತ್ರೆಗಳಿಗೆ ಅಂಗಗಳನ್ನು ರವಾನೆ ಮಾಡಲಾಯಿತು. ಬೆಂಗಳೂರಿನ ರಾಮಯ್ಯ ಆಸ್ಪತ್ರೆಗೆ ಹೃದಯ, ಎನ್ಯು ಆಸ್ಪತ್ರೆಗೆ ಕಿಡ್ನಿ, ಮೈಸೂರಿನ ಅಪೊಲೊ ಬಿಜಿಎಸ್ ಆಸ್ಪತ್ರೆಗೆ ಕಿಡ್ನಿ ಹಾಗೂ ಲಿವರ್ ನೀಡಲಾಯಿತು’ ಎಂದು ಆಸ್ಪತ್ರೆಯ ವೈದ್ಯಕೀಯ ಸೇವೆಗಳ ವ್ಯವಸ್ಥಾಪಕ ಸಿ.ಬಿ.ದಕ್ಷ್ ‘ಪ್ರಜಾವಾಣಿ’ಗೆ ತಿಳಿಸಿದರು.