ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಲುಜಾರಿ ಕಬಿನಿ ನಾಲೆಗೆ ಬಿದ್ದ ಬಿಎಸ್‌ಪಿ ಅಧ್ಯಕ್ಷನಿಗಾಗಿ ಹುಡುಕಾಟ

Last Updated 12 ಅಕ್ಟೋಬರ್ 2020, 8:50 IST
ಅಕ್ಷರ ಗಾತ್ರ

ನಂಜನಗೂಡು: ಭಾನುವಾರ ಬೆಳಿಗ್ಗೆ ವಾಯುವಿಹಾರಕ್ಕೆ ಹೋಗಿದ್ದಾಗ ಕಾಲು ಜಾರಿ ಮಾಡ್ರಹಳ್ಳಿ ಬಳಿ ಕಬಿನಿ ಬಲದಂಡೆ ಕಾಲುವೆಗೆ ಬಿ.ಎಸ್.ಪಿ. ತಾಲ್ಲೂಕು ಘಟಕದ ಅಧ್ಯಕ್ಷ ಎಂ.ರಾಮಚಂದ್ರ (45) ಬಿದ್ದಿದ್ದಾರೆ ಎನ್ನಲಾಗಿದೆ.

ಸಿಂಗಾರಿಪುರ ಗ್ರಾಮದ ನಿವಾಸಿ ರಾಮಚಂದ್ರ ಅವಿವಾಹಿತರಾಗಿದ್ದು, ಸಾಮಾಜಿಕ ಹೋರಾಟಗಾರರಾಗಿದ್ದರು. ಮುಂಜಾನೆ ವಾಯುವಿಹಾರಕ್ಕೆ ತೆರಳಿದ್ದ ವೇಳೆ ಕಾಲು ತೊಳೆಯಲು ನಾಲೆಗೆ ಇಳಿದಾಗ ಈ ದುರ್ಘಟನೆ ನಡೆದಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ರಾಮಚಂದ್ರ ಅವರ ಪತ್ತೆಗಾಗಿ ಹುಡುಕಾಟ ನಡೆದಿದ್ದು ಭಾನುವಾರ ರಾತ್ರಿಯವರೆಗೆ ಪತ್ತೆಯಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT