ಸಿಂಗಾರಿಪುರ ಗ್ರಾಮದ ನಿವಾಸಿ ರಾಮಚಂದ್ರ ಅವಿವಾಹಿತರಾಗಿದ್ದು, ಸಾಮಾಜಿಕ ಹೋರಾಟಗಾರರಾಗಿದ್ದರು. ಮುಂಜಾನೆ ವಾಯುವಿಹಾರಕ್ಕೆ ತೆರಳಿದ್ದ ವೇಳೆ ಕಾಲು ತೊಳೆಯಲು ನಾಲೆಗೆ ಇಳಿದಾಗ ಈ ದುರ್ಘಟನೆ ನಡೆದಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ರಾಮಚಂದ್ರ ಅವರ ಪತ್ತೆಗಾಗಿ ಹುಡುಕಾಟ ನಡೆದಿದ್ದು ಭಾನುವಾರ ರಾತ್ರಿಯವರೆಗೆ ಪತ್ತೆಯಾಗಿಲ್ಲ.