<p><strong>ಮೈಸೂರು: ‘</strong>ಬಹುಜನ ಸಮಾಜ ಪಕ್ಷಕ್ಕೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 25 ಸ್ಥಾನ ಗೆಲ್ಲುವ ಅವಕಾಶ ಇದ್ದು, ಸಂಘಟನೆಯಲ್ಲಿ ಕಾರ್ಯಕರ್ತರು ಹೆಚ್ಚು ತೊಡಗಿಸಿಕೊಳ್ಳಬೇಕು’ ಎಂದು ಬಿಎಸ್ಪಿ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಹೇಳಿದರು.</p>.<p>ನಗರದಲ್ಲಿ ಮಂಗಳವಾರ ನಡೆದ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ‘ಬಿಎಸ್ಪಿ ಕಾರ್ಯಕರ್ತರು ಎಂದರೆ ಅಧಿಕಾರಕ್ಕಾಗಿ ತಮ್ಮನ್ನು ಮಾರಿಕೊಂಡ ಶಾಸಕರಲ್ಲ. ಬಹುಜನ ಚಳವಳಿಯನ್ನು ನಂಬಿದವರು’ಎಂದು ಶಾಸಕ ಎನ್.ಮಹೇಶ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.</p>.<p>‘ಬಹುಜನ ಚಳವಳಿಯು ಶಾಸಕರೊಬ್ಬರನ್ನು ಸೂಟು–ಬೂಟು ಹಾಕಿಸಿ ವಿಧಾನಸಭೆಗೆ ಕಳುಹಿಸಿತ್ತು. ಇದೀಗ ಅವರು ಅಧಿಕಾರಕ್ಕಾಗಿ ಸೂಟು ಬೂಟು ಕಳಚಿ ಚಡ್ಡಿ ತೊಟ್ಟು ಚಳವಳಿಗೇ ಸವಾಲು ಹಾಕುತ್ತಿದ್ದಾರೆ’ ಎಂದು ವ್ಯಂಗ್ಯವಾಡಿದರು.</p>.<p>‘ಪಕ್ಷಕ್ಕೆ ಸವಾಲೆಸೆದಿರುವವರಿಗೆ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಿಸುವ ಮೂಲಕ ಕಾರ್ಯಕರ್ತರು ಪಾಠ ಕಲಿಸಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: ‘</strong>ಬಹುಜನ ಸಮಾಜ ಪಕ್ಷಕ್ಕೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 25 ಸ್ಥಾನ ಗೆಲ್ಲುವ ಅವಕಾಶ ಇದ್ದು, ಸಂಘಟನೆಯಲ್ಲಿ ಕಾರ್ಯಕರ್ತರು ಹೆಚ್ಚು ತೊಡಗಿಸಿಕೊಳ್ಳಬೇಕು’ ಎಂದು ಬಿಎಸ್ಪಿ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಹೇಳಿದರು.</p>.<p>ನಗರದಲ್ಲಿ ಮಂಗಳವಾರ ನಡೆದ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ‘ಬಿಎಸ್ಪಿ ಕಾರ್ಯಕರ್ತರು ಎಂದರೆ ಅಧಿಕಾರಕ್ಕಾಗಿ ತಮ್ಮನ್ನು ಮಾರಿಕೊಂಡ ಶಾಸಕರಲ್ಲ. ಬಹುಜನ ಚಳವಳಿಯನ್ನು ನಂಬಿದವರು’ಎಂದು ಶಾಸಕ ಎನ್.ಮಹೇಶ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.</p>.<p>‘ಬಹುಜನ ಚಳವಳಿಯು ಶಾಸಕರೊಬ್ಬರನ್ನು ಸೂಟು–ಬೂಟು ಹಾಕಿಸಿ ವಿಧಾನಸಭೆಗೆ ಕಳುಹಿಸಿತ್ತು. ಇದೀಗ ಅವರು ಅಧಿಕಾರಕ್ಕಾಗಿ ಸೂಟು ಬೂಟು ಕಳಚಿ ಚಡ್ಡಿ ತೊಟ್ಟು ಚಳವಳಿಗೇ ಸವಾಲು ಹಾಕುತ್ತಿದ್ದಾರೆ’ ಎಂದು ವ್ಯಂಗ್ಯವಾಡಿದರು.</p>.<p>‘ಪಕ್ಷಕ್ಕೆ ಸವಾಲೆಸೆದಿರುವವರಿಗೆ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಿಸುವ ಮೂಲಕ ಕಾರ್ಯಕರ್ತರು ಪಾಠ ಕಲಿಸಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>