‘ಕಾರಾಪುರ ಗ್ರಾಮದ ಸರ್ವೆ ನಂಬರ್ 142, 144ರಲ್ಲಿ ವಾಸದ ಮನೆ ಹೊರತುಪಡಿಸಿ ಹೆಚ್ಚಿನ ವಿಸ್ತೀರ್ಣದಲ್ಲಿ ಅನಧಿಕೃತ ಕಟ್ಟಡ ನಿರ್ಮಾಣ ಮಾಡುತ್ತಿರುವುದು ಕಂಡುಬಂದಿದೆ. ಸಾರ್ವಜನಿಕರ ದೂರಿನ ಮೇರೆಗೆ ಸ್ಥಳ ಪರಿಶೀಲನೆ ನಡೆಸಿದಾಗ ವಾಸ್ತವ ಸ್ಥಿತಿ ಅರಿವಾಗಿದೆ. ಹೀಗಾಗಿ, ಭೂ ಪರಿವರ್ತನೆ ಆದೇಶ, ಕಟ್ಟಡ ಪರವಾನಗಿ, ನಿರಾಕ್ಷೇಪಣಾ ಪತ್ರವನ್ನು ಮೂರು ದಿನಗಳೊಳಗೆ ಕಚೇರಿಗೆ ನೀಡಬೇಕು’ ಎಂದು ಜುಲೈ 1ರಂದು ನರಸಿಂಹಮೂರ್ತಿ ಎಂಬುವವರ ಹೆಸರಿಗೆ, ಎನ್.ಬೆಳತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಜು ಹಾಗೂ ಪಿಡಿಒ ಸ್ವಾಮಿ ನೋಟಿಸ್ ನೀಡಿದ್ದಾರೆ.