<p><strong>ಮೈಸೂರು</strong>: ಗೃಹ ಖಾತೆ ಕೊಟ್ಟರೆ ನನಗೆ ನಿಭಾಯಿಸುವ ಶಕ್ತಿ ಇದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ತಿಳಿಸಿದರು.</p>.<p>'25 ವರ್ಷ ಪೊಲೀಸ್ ಕೆಲಸ ಮಾಡಿದ್ದೇನೆ. ನಾನು ಗೃಹ ಖಾತೆ ಬಗ್ಗೆ ಚಿಂತನೆ ಮಾಡಿಲ್ಲ. ಗೃಹ ಖಾತೆ ನೀಡುವುದು ಮುಖ್ಯಮಂತ್ರಿ ವಿವೇಚನೆಗೆ ಬಿಟ್ಟಿದ್ದು' ಎಂದು ಇಲ್ಲಿ ಶುಕ್ರವಾರ ಸುದ್ದಿಗಾರರಿಗೆ ಹೇಳಿದರು.</p>.<p>'ಆರಗ ಜ್ಞಾನೇಂದ್ರ ಕೂಡ ಸಮರ್ಥವಾಗಿ ಕೆಲಸ ಮಾಡುತ್ತಿದ್ದಾರೆ. ಮೊಸರಲ್ಲಿ ಕುಲ್ಲು ಹುಡುಕುವ ಕೆಲಸ ಬೇಡ' ಎಂದರು.</p>.<p>'ರಾಜ್ಯದಲ್ಲಿ ಶಾಂತಿಭಂಗ ಉಂಟಾಗಿಲ್ಲ. ಶಾಂತಿ ಕೆಡಿಸಲು ಕೆಲವರು ಪ್ರಯತ್ನ ಮಾಡುತ್ತಿದ್ದಾರೆ.ಹುಬ್ಬಳ್ಳಿ ಗಲಭೆಯಲ್ಲಿ ಪೋಸ್ಟ್ ಹಾಕಿದವನನ್ನು ಬಂಧಿಸಲಾಗಿದೆ.ಆತನನ್ನ ವಶಕ್ಕೆ ಕೊಡಿ ಅಂತ ಸಾವಿರಾರು ಜನ ಸೇರಿ ಗೂಂಡಾ ವರ್ತನೆ ಮಾಡಿದರೆ ಅದು ಸರಿನಾ. ಅವರು ಆ ಮಟ್ಟಕ್ಕೆ ಹೋದರೆ ಇದು ಭಾರತವೋ ಅಥವಾ ತಾಲಿಬಾನೋ?ಇದಕ್ಕೆ ಉತ್ತರ ಕೊಡಬೇಕು' ಎಂದು ಕಿಡಿಕಾರಿದರು.</p>.<p>'ಕಾನೂನು ಯಾರೂ ಕೈಗೆತ್ತಿಕೊಳ್ಳಲಾಗಲ್ಲ. ಅಂತವರ ರಕ್ಷಣೆಯನ್ನ ಕಾಂಗ್ರೆಸ್ನವರುಮಾಡುತ್ತಾರೆ.ಇವರು ದೇಶದ ಪರವೋ ವಿರೋಧವೊ' ಎಂದು ಪ್ರಶ್ನಿಸಿದರು.</p>.<p>‘ಇಂದು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ರೈತರಿಗೆ 10 ಸಾವಿರ ಕೊಡುತ್ತಿದೆ. ಸಿದ್ದರಾಮಯ್ಯ ಅವರ ಕಾಲದಲ್ಲಿ ಏನಾದರು ಮಾಡಿದ್ದಾರಾ ಅವರು ಉತ್ತರ ಕೊಡಲಿ' ಎಂದು ಸವಾಲೆಸೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಗೃಹ ಖಾತೆ ಕೊಟ್ಟರೆ ನನಗೆ ನಿಭಾಯಿಸುವ ಶಕ್ತಿ ಇದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ತಿಳಿಸಿದರು.</p>.<p>'25 ವರ್ಷ ಪೊಲೀಸ್ ಕೆಲಸ ಮಾಡಿದ್ದೇನೆ. ನಾನು ಗೃಹ ಖಾತೆ ಬಗ್ಗೆ ಚಿಂತನೆ ಮಾಡಿಲ್ಲ. ಗೃಹ ಖಾತೆ ನೀಡುವುದು ಮುಖ್ಯಮಂತ್ರಿ ವಿವೇಚನೆಗೆ ಬಿಟ್ಟಿದ್ದು' ಎಂದು ಇಲ್ಲಿ ಶುಕ್ರವಾರ ಸುದ್ದಿಗಾರರಿಗೆ ಹೇಳಿದರು.</p>.<p>'ಆರಗ ಜ್ಞಾನೇಂದ್ರ ಕೂಡ ಸಮರ್ಥವಾಗಿ ಕೆಲಸ ಮಾಡುತ್ತಿದ್ದಾರೆ. ಮೊಸರಲ್ಲಿ ಕುಲ್ಲು ಹುಡುಕುವ ಕೆಲಸ ಬೇಡ' ಎಂದರು.</p>.<p>'ರಾಜ್ಯದಲ್ಲಿ ಶಾಂತಿಭಂಗ ಉಂಟಾಗಿಲ್ಲ. ಶಾಂತಿ ಕೆಡಿಸಲು ಕೆಲವರು ಪ್ರಯತ್ನ ಮಾಡುತ್ತಿದ್ದಾರೆ.ಹುಬ್ಬಳ್ಳಿ ಗಲಭೆಯಲ್ಲಿ ಪೋಸ್ಟ್ ಹಾಕಿದವನನ್ನು ಬಂಧಿಸಲಾಗಿದೆ.ಆತನನ್ನ ವಶಕ್ಕೆ ಕೊಡಿ ಅಂತ ಸಾವಿರಾರು ಜನ ಸೇರಿ ಗೂಂಡಾ ವರ್ತನೆ ಮಾಡಿದರೆ ಅದು ಸರಿನಾ. ಅವರು ಆ ಮಟ್ಟಕ್ಕೆ ಹೋದರೆ ಇದು ಭಾರತವೋ ಅಥವಾ ತಾಲಿಬಾನೋ?ಇದಕ್ಕೆ ಉತ್ತರ ಕೊಡಬೇಕು' ಎಂದು ಕಿಡಿಕಾರಿದರು.</p>.<p>'ಕಾನೂನು ಯಾರೂ ಕೈಗೆತ್ತಿಕೊಳ್ಳಲಾಗಲ್ಲ. ಅಂತವರ ರಕ್ಷಣೆಯನ್ನ ಕಾಂಗ್ರೆಸ್ನವರುಮಾಡುತ್ತಾರೆ.ಇವರು ದೇಶದ ಪರವೋ ವಿರೋಧವೊ' ಎಂದು ಪ್ರಶ್ನಿಸಿದರು.</p>.<p>‘ಇಂದು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ರೈತರಿಗೆ 10 ಸಾವಿರ ಕೊಡುತ್ತಿದೆ. ಸಿದ್ದರಾಮಯ್ಯ ಅವರ ಕಾಲದಲ್ಲಿ ಏನಾದರು ಮಾಡಿದ್ದಾರಾ ಅವರು ಉತ್ತರ ಕೊಡಲಿ' ಎಂದು ಸವಾಲೆಸೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>