ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶಾಸಕ ಸುರೇಶ್ ಗೌಡ ಅವರು ನಾನು ಯಾವ ಪಕ್ಷದಲ್ಲಿದ್ದೇನೆ ಎಂದು ಗೊತ್ತಿಲ್ಲ ಎಂದು ಹೇಳಿರುವುದಕ್ಕೆ ಸಂಬಂಧಿಸಿ ನಾನು ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರ ಭಾವಚಿತ್ರವನ್ನು ಕಚೇರಿಯ ಮುಂದೆ ಹಾಕಿದ್ದೇನೆ. ಜನ ಸೇವೆಯಲ್ಲಿ ತೊಡಗಿ ದ್ದೇನೆ. ಅದನ್ನು ನೋಡಿದರೆ ನಾನು ಯಾವ ಪಕ್ಷದಲ್ಲಿದ್ದೇನೆ ಎಂದು ಅವರಿಗೆ ತಿಳಿಯುತ್ತದೆ. ಶಾಸಕ ಸುರೇಶ್ ಗೌಡ ಅವರಿಗೆ ಈಗ ಅಪ್ಪಾಜಿಗೌಡ ರಾಗಲೀ, ಶಿವ ರಾಮೇಗೌಡ ರಾಗಲೀ ಮತ್ತು ಮೂಲ ಜೆಡಿಎಸ್ನ ವರಾಗಲೀ ಕಣ್ಣಿಗೆ ಬೀಳುತ್ತಿಲ್ಲ’ ಎಂದರು.