<p><strong>ಮೈಸೂರು:</strong> ಮೈಸೂರು–ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದ ಗ್ರಾಮಾಂತರ ಪ್ರದೇಶದಲ್ಲಿ ಮೂರೂ ಪಕ್ಷಗಳ ಅಭ್ಯರ್ಥಿಗಳು ಹಾಗೂ ಮುಖಂಡರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ.</p>.<p>ಹುಣಸೂರಿನಲ್ಲಿ ಹಾಗೂ ಪಿರಿಯಾಪಟ್ಟಣದಲ್ಲಿ ಶನಿವಾರ ಕಾಂಗ್ರೆಸ್ ಪ್ರಚಾರ ಸಭೆ ನಡೆಯಿತು. ಅಭ್ಯರ್ಥಿ ಡಾ.ಡಿ.ತಿಮ್ಮಯ್ಯ ಪರ ಮತಯಾಚಿಸಲಾಯಿತು.</p>.<p>ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮಾತನಾಡಿ, ‘ರಾಜ್ಯ ಸರ್ಕಾರ ನಿಷ್ಕ್ರಿಯವಾಗಿದ್ದು, ಆರ್ಥಿಕ ಬಿಟ್ಟಿನಿಂದ ಪಂಚಾಯಿತಿಗಳಿಗೆ ಸಲ್ಲಬೇಕಿ ರುವ ಅನುದಾನ ತಡೆಹಿಡಿಯಲಾಗಿದೆ. ಹೀಗಾಗಿ, ಪಂಚಾಯಿತಿಗಳು ಸ್ವತಂತ್ರವಾಗಿ ಕೆಲಸ ನಿರ್ವಹಿಸಲಾಗದ ಪರಿಸ್ಥಿತಿ ಸೃಷ್ಟಿಯಾಗಿದೆ’ ಎಂದರು.</p>.<p>‘ಗಾಂಧೀಜಿ ಕೊಂದ ಪಕ್ಷದ ವರಿಗೆ ಗಾಂಧಿ ಸ್ವರಾಜ್ ಕಲ್ಪನೆ ಬರುವುದಾದರೂ ಹೇಗೆ? ಧಾರ್ಮಿಕ ಸೂಕ್ಷ್ಮತೆ<br />ಯನ್ನು ರಾಜಕೀಯಕ್ಕೆ ಬೆಸೆದು ಅಧಿಕಾರದ ಚುಕ್ಕಾಣಿ ಹಿಡಿಯುವ ಬಿಜೆಪಿಗೆ ಜಾತ್ಯತೀತ ತತ್ವ ಸಿದ್ಧಾಂತ ತಿಳಿಯುವುದಾ<br />ದರೂ ಹೇಗೆ’ ಎಂದು ಪ್ರಶ್ನಿಸಿದರು.</p>.<p>ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ, ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್, ಶಾಸಕ ಎಚ್.ಪಿ.ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಆರ್.ಧರ್ಮಸೇನ, ಮಾಜಿ ಶಾಸಕ ಕೆ.ವೆಂಕಟೇಶ್, ಗ್ರಾಮಾಂ<br />ತರ ಘಟಕದ ಅಧ್ಯಕ್ಷ ಬಿ.ಜೆ.ವಿಜಯ್ ಕುಮಾರ್ ಪಾಲ್ಗೊಂಡಿದ್ದರು. ಶಾಸಕ ಸಾ.ರಾ.ಮಹೇಶ್ ಸಾರಥ್ಯದಲ್ಲಿ ಕೆ.ಆರ್.ನಗರದಲ್ಲಿ ಜೆಡಿಎಸ್ ಸಭೆ ನಡೆಯಿತು. ಪಕ್ಷದ ಅಭ್ಯರ್ಥಿ ಸಿ.ಎನ್.ಮಂಜೇಗೌಡ ಪರ ಮತಯಾಚಿಸಿದರು.</p>.<p>‘ಬಿಜೆಪಿಯ ಅಧಿಕಾರಾವಧಿ ಉಳಿದಿರುವುದು ಕೇವಲ 1 ವರ್ಷ, 4 ತಿಂಗಳು. ಹಾಗಾದರೆ ಅವರು ಮನೆ ಕೊಡುವುದು ಯಾವಾಗ, ಇಂಥವರಿಗೆ ನೀವು ವೋಟು ಕೊಡಬೇಕಾ? ರಾಜ್ಯದಲ್ಲಿ ಅಭಿವೃದ್ಧಿ ಮಾಡುವ ಪ್ರಾದೇಶಿಕ ಪಕ್ಷ ಬೇಕೋ ಅಥವಾ ಲೂಟಿ ಹೊಡೆಯುವ ಸರ್ಕಾರ ಬೇಕೋ ಎನ್ನುವುದನ್ನು ಮತದಾರರೇ ತೀರ್ಮಾನಿಸಬೇಕು’ ಎಂದು ಸಾ.ರಾ.ಮಹೇಶ್ ಹೇಳಿದರು.</p>.<p>ಬಿಜೆಪಿ ಅಭ್ಯರ್ಥಿ ಆರ್.ರಘು (ಕೌಟಿಲ್ಯ) ಅವರು ಮೈಸೂರಿನ ಶಾಖಾಮಠದಲ್ಲಿ ಕಾಗಿನೆಲೆ ಕನಕ ಗುರುಪೀಠದ ಪೀಠಾಧ್ಯಕ್ಷ ಶಿವಾನಂದಪುರಿ ಸ್ವಾಮೀಜಿ ಭೇಟಿ ಮಾಡಿ ಆಶೀರ್ವಾದ ಪಡೆದರು.</p>.<p>ತಿ.ನರಸೀಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ನೇತೃತ್ವದಲ್ಲಿ ಸಭೆ ನಡೆಯಿತು. ಬನ್ನೂರು, ಉಕ್ಕಲಗೆರೆ, ಸೋಮನಾಥಪುರ, ಹೆಗ್ಗೂರು, ಕೇತುಪುರದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಮುಖಂಡರು ಪಾಲ್ಗೊಂಡಿದ್ದರು.</p>.<p>ಕ್ಷೇತ್ರ ವ್ಯಾಪ್ತಿಯ 29 ಪಂಚಾಯಿತಿಯ ಪ್ರಮುಖರ ಜವಾಬ್ದಾರಿಯನ್ನು ತಿಳಿಸಿದರು. ಸದಸ್ಯರನ್ನು ಭೇಟಿ ಮಾಡಿ ಮನವೊಲಿಸುವ ಎರಡೂ ಕಾರ್ಯ ಪ್ರಾರಂಭವಾಗಬೇಕು. ಮೊದಲ ಪ್ರಾಶಸ್ತ್ಯ ಮತವನ್ನು ಬಿಜೆಪಿ ಅಭ್ಯರ್ಥಿಗೆ ಹಾಕಿಸಬೇಕು ಎಂದು ರಾಮದಾಸ್ ಕರೆ ನೀಡಿದರು.</p>.<p>ತಿ.ನರಸೀಪುರ ಬಿಜೆಪಿ ಅಧ್ಯಕ್ಷ ಲೋಕೇಶ್, ಮಾಜಿ ವಿಧಾನಪರಿಷತ್ ಸದಸ್ಯ ಸಿ.ರಮೇಶ್, ಪ್ರಮುಖರಾದ ಭಾರತಿಶಂಕರ್, ತೋಟದಪ್ಪ ಬಸವರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಮೈಸೂರು–ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದ ಗ್ರಾಮಾಂತರ ಪ್ರದೇಶದಲ್ಲಿ ಮೂರೂ ಪಕ್ಷಗಳ ಅಭ್ಯರ್ಥಿಗಳು ಹಾಗೂ ಮುಖಂಡರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ.</p>.<p>ಹುಣಸೂರಿನಲ್ಲಿ ಹಾಗೂ ಪಿರಿಯಾಪಟ್ಟಣದಲ್ಲಿ ಶನಿವಾರ ಕಾಂಗ್ರೆಸ್ ಪ್ರಚಾರ ಸಭೆ ನಡೆಯಿತು. ಅಭ್ಯರ್ಥಿ ಡಾ.ಡಿ.ತಿಮ್ಮಯ್ಯ ಪರ ಮತಯಾಚಿಸಲಾಯಿತು.</p>.<p>ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮಾತನಾಡಿ, ‘ರಾಜ್ಯ ಸರ್ಕಾರ ನಿಷ್ಕ್ರಿಯವಾಗಿದ್ದು, ಆರ್ಥಿಕ ಬಿಟ್ಟಿನಿಂದ ಪಂಚಾಯಿತಿಗಳಿಗೆ ಸಲ್ಲಬೇಕಿ ರುವ ಅನುದಾನ ತಡೆಹಿಡಿಯಲಾಗಿದೆ. ಹೀಗಾಗಿ, ಪಂಚಾಯಿತಿಗಳು ಸ್ವತಂತ್ರವಾಗಿ ಕೆಲಸ ನಿರ್ವಹಿಸಲಾಗದ ಪರಿಸ್ಥಿತಿ ಸೃಷ್ಟಿಯಾಗಿದೆ’ ಎಂದರು.</p>.<p>‘ಗಾಂಧೀಜಿ ಕೊಂದ ಪಕ್ಷದ ವರಿಗೆ ಗಾಂಧಿ ಸ್ವರಾಜ್ ಕಲ್ಪನೆ ಬರುವುದಾದರೂ ಹೇಗೆ? ಧಾರ್ಮಿಕ ಸೂಕ್ಷ್ಮತೆ<br />ಯನ್ನು ರಾಜಕೀಯಕ್ಕೆ ಬೆಸೆದು ಅಧಿಕಾರದ ಚುಕ್ಕಾಣಿ ಹಿಡಿಯುವ ಬಿಜೆಪಿಗೆ ಜಾತ್ಯತೀತ ತತ್ವ ಸಿದ್ಧಾಂತ ತಿಳಿಯುವುದಾ<br />ದರೂ ಹೇಗೆ’ ಎಂದು ಪ್ರಶ್ನಿಸಿದರು.</p>.<p>ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ, ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್, ಶಾಸಕ ಎಚ್.ಪಿ.ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಆರ್.ಧರ್ಮಸೇನ, ಮಾಜಿ ಶಾಸಕ ಕೆ.ವೆಂಕಟೇಶ್, ಗ್ರಾಮಾಂ<br />ತರ ಘಟಕದ ಅಧ್ಯಕ್ಷ ಬಿ.ಜೆ.ವಿಜಯ್ ಕುಮಾರ್ ಪಾಲ್ಗೊಂಡಿದ್ದರು. ಶಾಸಕ ಸಾ.ರಾ.ಮಹೇಶ್ ಸಾರಥ್ಯದಲ್ಲಿ ಕೆ.ಆರ್.ನಗರದಲ್ಲಿ ಜೆಡಿಎಸ್ ಸಭೆ ನಡೆಯಿತು. ಪಕ್ಷದ ಅಭ್ಯರ್ಥಿ ಸಿ.ಎನ್.ಮಂಜೇಗೌಡ ಪರ ಮತಯಾಚಿಸಿದರು.</p>.<p>‘ಬಿಜೆಪಿಯ ಅಧಿಕಾರಾವಧಿ ಉಳಿದಿರುವುದು ಕೇವಲ 1 ವರ್ಷ, 4 ತಿಂಗಳು. ಹಾಗಾದರೆ ಅವರು ಮನೆ ಕೊಡುವುದು ಯಾವಾಗ, ಇಂಥವರಿಗೆ ನೀವು ವೋಟು ಕೊಡಬೇಕಾ? ರಾಜ್ಯದಲ್ಲಿ ಅಭಿವೃದ್ಧಿ ಮಾಡುವ ಪ್ರಾದೇಶಿಕ ಪಕ್ಷ ಬೇಕೋ ಅಥವಾ ಲೂಟಿ ಹೊಡೆಯುವ ಸರ್ಕಾರ ಬೇಕೋ ಎನ್ನುವುದನ್ನು ಮತದಾರರೇ ತೀರ್ಮಾನಿಸಬೇಕು’ ಎಂದು ಸಾ.ರಾ.ಮಹೇಶ್ ಹೇಳಿದರು.</p>.<p>ಬಿಜೆಪಿ ಅಭ್ಯರ್ಥಿ ಆರ್.ರಘು (ಕೌಟಿಲ್ಯ) ಅವರು ಮೈಸೂರಿನ ಶಾಖಾಮಠದಲ್ಲಿ ಕಾಗಿನೆಲೆ ಕನಕ ಗುರುಪೀಠದ ಪೀಠಾಧ್ಯಕ್ಷ ಶಿವಾನಂದಪುರಿ ಸ್ವಾಮೀಜಿ ಭೇಟಿ ಮಾಡಿ ಆಶೀರ್ವಾದ ಪಡೆದರು.</p>.<p>ತಿ.ನರಸೀಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ನೇತೃತ್ವದಲ್ಲಿ ಸಭೆ ನಡೆಯಿತು. ಬನ್ನೂರು, ಉಕ್ಕಲಗೆರೆ, ಸೋಮನಾಥಪುರ, ಹೆಗ್ಗೂರು, ಕೇತುಪುರದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಮುಖಂಡರು ಪಾಲ್ಗೊಂಡಿದ್ದರು.</p>.<p>ಕ್ಷೇತ್ರ ವ್ಯಾಪ್ತಿಯ 29 ಪಂಚಾಯಿತಿಯ ಪ್ರಮುಖರ ಜವಾಬ್ದಾರಿಯನ್ನು ತಿಳಿಸಿದರು. ಸದಸ್ಯರನ್ನು ಭೇಟಿ ಮಾಡಿ ಮನವೊಲಿಸುವ ಎರಡೂ ಕಾರ್ಯ ಪ್ರಾರಂಭವಾಗಬೇಕು. ಮೊದಲ ಪ್ರಾಶಸ್ತ್ಯ ಮತವನ್ನು ಬಿಜೆಪಿ ಅಭ್ಯರ್ಥಿಗೆ ಹಾಕಿಸಬೇಕು ಎಂದು ರಾಮದಾಸ್ ಕರೆ ನೀಡಿದರು.</p>.<p>ತಿ.ನರಸೀಪುರ ಬಿಜೆಪಿ ಅಧ್ಯಕ್ಷ ಲೋಕೇಶ್, ಮಾಜಿ ವಿಧಾನಪರಿಷತ್ ಸದಸ್ಯ ಸಿ.ರಮೇಶ್, ಪ್ರಮುಖರಾದ ಭಾರತಿಶಂಕರ್, ತೋಟದಪ್ಪ ಬಸವರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>