<p><strong>ಮೈಸೂರು: </strong>‘ಮೈಸೂರು ಜಿಲ್ಲಾ ಸಹಕಾರ ಒಕ್ಕೂಟದ ಆಡಳಿತ ಮಂಡಳಿಯ ನಿರ್ದೇಶಕರ ಆಯ್ಕೆಯ ಚುನಾವಣೆಯನ್ನು ರದ್ದುಗೊಳಿಸಿ’ ಎಂದು ಕಾಂಗ್ರೆಸ್ ಮುಖಂಡ ಮೆಲ್ಲಹಳ್ಳಿ ಮಹದೇವಸ್ವಾಮಿ ಆಗ್ರಹಿಸಿದರು.</p>.<p>‘ರಾಜ್ಯದ ವಿವಿಧೆಡೆ ಈಗಾಗಲೇ ಚುನಾವಣೆ ಮುಂದೂಡಲಾಗಿದೆ. ಆದರೆ ಮೈಸೂರು ಜಿಲ್ಲೆಯಲ್ಲಿ ಮಾತ್ರ ಶಾಸಕ ಜಿ.ಟಿ.ದೇವೇಗೌಡ ಕುಮ್ಮಕ್ಕಿನಿಂದ ಚುನಾವಣೆ ನಡೆಸಲಾಗುತ್ತಿದೆ’ ಎಂದು ಮಂಗಳವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ದೂರಿದರು.</p>.<p>‘ಕೋವಿಡ್ ಹೆಚ್ಚುತ್ತಿರುವ ಆತಂಕದ ನಡುವೆಯೇ ಜುಲೈ 30ರಂದು ಚುನಾವಣೆ ನಡೆಸಲು ಸಿದ್ಧತೆ ನಡೆದಿವೆ. ಜಿ.ಟಿ.ದೇವೇಗೌಡರಿಗಾಗಿಯೇ ಈ ಚುನಾವಣೆ ನಡೆಸಲಾಗುತ್ತಿದೆ. ಸಹಕಾರ ಇಲಾಖೆಯ ಅಧಿಕಾರಿಗಳು ಇದರಲ್ಲಿ ಶಾಮೀಲಾಗಿದ್ದಾರೆ’ ಎಂದು ಆರೋಪಿಸಿದರು.</p>.<p>‘ಜಿಲ್ಲೆಯ ಬಹುತೇಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಇನ್ನೂ ಚುನಾಯಿತ ನಿರ್ದೇಶಕರ ಆಡಳಿತ ಮಂಡಳಿಯಿಲ್ಲ. ಮೊದಲು ಈ ಸೊಸೈಟಿಗಳಿಗೆ ಚುನಾವಣೆ ನಡೆಸಲಿ. ನಂತರ ಒಕ್ಕೂಟಕ್ಕೆ ಚುನಾವಣೆ ನಡೆಸಲಿ. ಇದೆಲ್ಲದಕ್ಕೂ ಮೊದಲು ಕೋವಿಡ್–19 ಮುಕ್ತವಾಗಲಿ. ಕೊರೊನಾ ವೈರಸ್ ಸೋಂಕು ಹಬ್ಬುತ್ತಿರುವ ನಡುವೆಯೇ ಚುನಾವಣೆ ನಡೆಸಿದರೆ, ನ್ಯಾಯಾಲಯದ ಮೊರೆ ಹೋಗಬೇಕಾಗುತ್ತದೆ’ ಎಂದು ಮಹದೇವಸ್ವಾಮಿ ಹೇಳಿದರು.</p>.<p>ಮೈಸೂರು ಪಿಇಎಆರ್ಡಿ ಅಧ್ಯಕ್ಷ ಡಿ.ಬಿ.ನಾಗರಾಜು, ರಾಘವ ಎಂ ಗೌಡ, ನಗರ್ಲೆ ಸರ್ವೇಶ್ ಪತ್ರಿಕಾಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>‘ಮೈಸೂರು ಜಿಲ್ಲಾ ಸಹಕಾರ ಒಕ್ಕೂಟದ ಆಡಳಿತ ಮಂಡಳಿಯ ನಿರ್ದೇಶಕರ ಆಯ್ಕೆಯ ಚುನಾವಣೆಯನ್ನು ರದ್ದುಗೊಳಿಸಿ’ ಎಂದು ಕಾಂಗ್ರೆಸ್ ಮುಖಂಡ ಮೆಲ್ಲಹಳ್ಳಿ ಮಹದೇವಸ್ವಾಮಿ ಆಗ್ರಹಿಸಿದರು.</p>.<p>‘ರಾಜ್ಯದ ವಿವಿಧೆಡೆ ಈಗಾಗಲೇ ಚುನಾವಣೆ ಮುಂದೂಡಲಾಗಿದೆ. ಆದರೆ ಮೈಸೂರು ಜಿಲ್ಲೆಯಲ್ಲಿ ಮಾತ್ರ ಶಾಸಕ ಜಿ.ಟಿ.ದೇವೇಗೌಡ ಕುಮ್ಮಕ್ಕಿನಿಂದ ಚುನಾವಣೆ ನಡೆಸಲಾಗುತ್ತಿದೆ’ ಎಂದು ಮಂಗಳವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ದೂರಿದರು.</p>.<p>‘ಕೋವಿಡ್ ಹೆಚ್ಚುತ್ತಿರುವ ಆತಂಕದ ನಡುವೆಯೇ ಜುಲೈ 30ರಂದು ಚುನಾವಣೆ ನಡೆಸಲು ಸಿದ್ಧತೆ ನಡೆದಿವೆ. ಜಿ.ಟಿ.ದೇವೇಗೌಡರಿಗಾಗಿಯೇ ಈ ಚುನಾವಣೆ ನಡೆಸಲಾಗುತ್ತಿದೆ. ಸಹಕಾರ ಇಲಾಖೆಯ ಅಧಿಕಾರಿಗಳು ಇದರಲ್ಲಿ ಶಾಮೀಲಾಗಿದ್ದಾರೆ’ ಎಂದು ಆರೋಪಿಸಿದರು.</p>.<p>‘ಜಿಲ್ಲೆಯ ಬಹುತೇಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಇನ್ನೂ ಚುನಾಯಿತ ನಿರ್ದೇಶಕರ ಆಡಳಿತ ಮಂಡಳಿಯಿಲ್ಲ. ಮೊದಲು ಈ ಸೊಸೈಟಿಗಳಿಗೆ ಚುನಾವಣೆ ನಡೆಸಲಿ. ನಂತರ ಒಕ್ಕೂಟಕ್ಕೆ ಚುನಾವಣೆ ನಡೆಸಲಿ. ಇದೆಲ್ಲದಕ್ಕೂ ಮೊದಲು ಕೋವಿಡ್–19 ಮುಕ್ತವಾಗಲಿ. ಕೊರೊನಾ ವೈರಸ್ ಸೋಂಕು ಹಬ್ಬುತ್ತಿರುವ ನಡುವೆಯೇ ಚುನಾವಣೆ ನಡೆಸಿದರೆ, ನ್ಯಾಯಾಲಯದ ಮೊರೆ ಹೋಗಬೇಕಾಗುತ್ತದೆ’ ಎಂದು ಮಹದೇವಸ್ವಾಮಿ ಹೇಳಿದರು.</p>.<p>ಮೈಸೂರು ಪಿಇಎಆರ್ಡಿ ಅಧ್ಯಕ್ಷ ಡಿ.ಬಿ.ನಾಗರಾಜು, ರಾಘವ ಎಂ ಗೌಡ, ನಗರ್ಲೆ ಸರ್ವೇಶ್ ಪತ್ರಿಕಾಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>