ಆರೋಪಿಗಳ ಪತ್ತೆಗಾಗಿ ಬಂಡೀಪುರ ರಾಷ್ಟ್ರೀಯ ಉದ್ಯಾನದಿಂದ ‘ರಾಣಾ’ ಎಂಬ ಶ್ವಾನವನ್ನು ಕರೆ ತರಲಾಗಿತ್ತು. ಅನುಮಾನ ಬಂದ ಪ್ರದೇಶಕ್ಕೆ ತೆರಳಿ ಪರಿಶೀಲಿಸಿದಾಗ ಈ ಶ್ವಾನವು ಮೊದಲಿಗೆ ಸಂತೋಷ್ ಎಂಬಾತನ ಮನೆಗೆ ಹೋಗಿದೆ. ಅಲ್ಲಿ ಒಂದೂವರೆ ಕೆ.ಜಿಯಷ್ಟು ಜಿಂಕೆ ಮಾಂಸ ಪತ್ತೆಯಾಗಿದೆ. ಸಂತೋಷ್ನನ್ನು ವಿಚಾರಣೆಗೆ ಒಳಪಡಿಸಿದಾಗ ಹುಲಿ ಬೇಟೆಯಾಡಿರುವುದು ಗೊತ್ತಾಗಿದೆ.