<p><strong>ಎಚ್.ಡಿ.ಕೋಟೆ</strong>: ತಾಲ್ಲೂಕಿನ ತುಂಬಸೋಗೆ ಪಂಚಾಯಿತಿ ವ್ಯಾಪ್ತಿಯ ಜಕ್ಕಹಳ್ಳಿ ಗ್ರಾಮದ ಕುಡಿಯುವ ನೀರಿನ ಟ್ಯಾಂಕ್ನಲ್ಲಿ ಕಾಗೆಯ ಕಳೇಬರ ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಉಂಟಾಗಿದೆ.</p>.<p>ಕುಡಿಯುವ ನೀರು ದುರ್ವಾಸನೆ ಬಂದು, ಅನೇಕ ದಿನಗಳ ಬಳಿಕ ನೀರು ಬಾರದಿದ್ದರಿಂದ ಗ್ರಾಮಸ್ಥರ ಒತ್ತಾಯದ ಮೇರೆಗೆ ಪಂಚಾಯಿತಿ ಸಿಬ್ಬಂದಿ ಟ್ಯಾಂಕ್ ಪರೀಕ್ಷಿಸಿದಾಗ ಪೈಪ್ನೊಳಗೆ ಕಾಗೆಯ ಕಳೇಬರ ಸಿಕ್ಕಿಹಾಕಿಕೊಂಡಿರುವುದು ಬಯಲಾಗಿದೆ.</p>.<p>ಗ್ರಾಮ ಪಂಚಾಯಿತಿ ಸಿಬ್ಬಂದಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>‘ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಸಾಕಷ್ಟು ದಿನಗಳಿಂದ ಎದುರಾಗಿದ್ದು, ಗ್ರಾಮ ಪಂಚಾಯಿತಿ ಸಮಸ್ಯೆಗೆ ಪರಿಹಾರ ಸೂಚಿಸುವಲ್ಲಿ ವಿಫಲವಾಗಿದೆ. ಶುದ್ಧ ಕುಡಿಯುವ ನೀರಿನ ಘಟಕದಲ್ಲಿಯೂ ಸರಿಯಾದ ನೀರು ಬರುವುದಿಲ್ಲ. ಟ್ಯಾಂಕ್ ಅನ್ನು ಶುಚಿಯಾಗಿ ಇಟ್ಟುಕೊಂಡಿಲ್ಲ’ ಎಂದು ಗ್ರಾಮದ ಮುರಳಿ ಆರೋಪಿಸುತ್ತಾರೆ.</p>.<p>‘ಈ ಹಿಂದೆ ಕಲುಷಿತ ನೀರು ಸೇವಿಸಿ 60ಕ್ಕೂ ಹೆಚ್ಚು ಜನ ಅನಾರೋಗ್ಯಕ್ಕೀಡಾಗಿದ್ದರು. ಅದೇ ಪರಿಸ್ಥಿತಿ ಮರುಕಳಿಸುವುದು ಬೇಡ. ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕು’ ಎಂದು ಗ್ರಾಮದ ಚಲುವರಾಜು,ಮಹದೇವು ಒತ್ತಾಯಿಸಿದರು.</p>.<p>‘ನೀರಿನ ಟ್ಯಾಂಕ್ ನಿರ್ವಹಣೆಯನ್ನು ಗುತ್ತಿಗೆ ನೀಡಲಾಗಿದೆ. ಕುಡಿಯುವ ನೀರು ವಾಸನೆ ಬರುತ್ತಿದ್ದು, ಪರಿಶೀಲಿಸಿದಾಗ ಕಾಗೆ ಸತ್ತಿರುವುದು ಪತ್ತೆಯಾಗಿದೆ. ಕೂಡಲೇ ಟೆಂಡರ್ ಪಡೆದವರನ್ನು ಕರೆದು ಟ್ಯಾಂಕ್ ಸ್ವಚ್ಛತೆಗೆ ಸೂಚಿಸಲಾಗಿದೆ’ ಎಂದು ತುಂಬಸೋಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಧುರಾ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಎಚ್.ಡಿ.ಕೋಟೆ</strong>: ತಾಲ್ಲೂಕಿನ ತುಂಬಸೋಗೆ ಪಂಚಾಯಿತಿ ವ್ಯಾಪ್ತಿಯ ಜಕ್ಕಹಳ್ಳಿ ಗ್ರಾಮದ ಕುಡಿಯುವ ನೀರಿನ ಟ್ಯಾಂಕ್ನಲ್ಲಿ ಕಾಗೆಯ ಕಳೇಬರ ಪತ್ತೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಉಂಟಾಗಿದೆ.</p>.<p>ಕುಡಿಯುವ ನೀರು ದುರ್ವಾಸನೆ ಬಂದು, ಅನೇಕ ದಿನಗಳ ಬಳಿಕ ನೀರು ಬಾರದಿದ್ದರಿಂದ ಗ್ರಾಮಸ್ಥರ ಒತ್ತಾಯದ ಮೇರೆಗೆ ಪಂಚಾಯಿತಿ ಸಿಬ್ಬಂದಿ ಟ್ಯಾಂಕ್ ಪರೀಕ್ಷಿಸಿದಾಗ ಪೈಪ್ನೊಳಗೆ ಕಾಗೆಯ ಕಳೇಬರ ಸಿಕ್ಕಿಹಾಕಿಕೊಂಡಿರುವುದು ಬಯಲಾಗಿದೆ.</p>.<p>ಗ್ರಾಮ ಪಂಚಾಯಿತಿ ಸಿಬ್ಬಂದಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>‘ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಸಾಕಷ್ಟು ದಿನಗಳಿಂದ ಎದುರಾಗಿದ್ದು, ಗ್ರಾಮ ಪಂಚಾಯಿತಿ ಸಮಸ್ಯೆಗೆ ಪರಿಹಾರ ಸೂಚಿಸುವಲ್ಲಿ ವಿಫಲವಾಗಿದೆ. ಶುದ್ಧ ಕುಡಿಯುವ ನೀರಿನ ಘಟಕದಲ್ಲಿಯೂ ಸರಿಯಾದ ನೀರು ಬರುವುದಿಲ್ಲ. ಟ್ಯಾಂಕ್ ಅನ್ನು ಶುಚಿಯಾಗಿ ಇಟ್ಟುಕೊಂಡಿಲ್ಲ’ ಎಂದು ಗ್ರಾಮದ ಮುರಳಿ ಆರೋಪಿಸುತ್ತಾರೆ.</p>.<p>‘ಈ ಹಿಂದೆ ಕಲುಷಿತ ನೀರು ಸೇವಿಸಿ 60ಕ್ಕೂ ಹೆಚ್ಚು ಜನ ಅನಾರೋಗ್ಯಕ್ಕೀಡಾಗಿದ್ದರು. ಅದೇ ಪರಿಸ್ಥಿತಿ ಮರುಕಳಿಸುವುದು ಬೇಡ. ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕು’ ಎಂದು ಗ್ರಾಮದ ಚಲುವರಾಜು,ಮಹದೇವು ಒತ್ತಾಯಿಸಿದರು.</p>.<p>‘ನೀರಿನ ಟ್ಯಾಂಕ್ ನಿರ್ವಹಣೆಯನ್ನು ಗುತ್ತಿಗೆ ನೀಡಲಾಗಿದೆ. ಕುಡಿಯುವ ನೀರು ವಾಸನೆ ಬರುತ್ತಿದ್ದು, ಪರಿಶೀಲಿಸಿದಾಗ ಕಾಗೆ ಸತ್ತಿರುವುದು ಪತ್ತೆಯಾಗಿದೆ. ಕೂಡಲೇ ಟೆಂಡರ್ ಪಡೆದವರನ್ನು ಕರೆದು ಟ್ಯಾಂಕ್ ಸ್ವಚ್ಛತೆಗೆ ಸೂಚಿಸಲಾಗಿದೆ’ ಎಂದು ತುಂಬಸೋಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಧುರಾ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>