<p><strong>ಮೈಸೂರು</strong>: ಅರಣ್ಯ ಇಲಾಖೆಯ ಅನುಮತಿ ಪಡೆಯದೇ ಉದ್ಯಾನದಲ್ಲಿದ್ದ 3 ಮರಗಳನ್ನು ಕತ್ತರಿಸಿದ ವಾಣಿವಿಲಾಸ ನೀರು ಸರಬರಾಜು ಕೇಂದ್ರದ ಇಬ್ಬರು ಅಧಿಕಾರಿಗಳ ವಿರುದ್ಧ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಪರಿಸರವಾದಿ ಭಾನು ಮೋಹನ್ ಅವರು ದೂರು ನೀಡಿದ್ದರು.</p>.<p>ಬೃಂದಾವನ ಬಡಾವಣೆಯಲ್ಲಿರುವ ಉದ್ಯಾನದಲ್ಲಿ ಶುದ್ಧ ಕುಡಿಯುವ ನೀರಿನ ಘಟಕದ ಸ್ಥಾಪನೆಗಾಗಿ ಒಟ್ಟು 4 ಮರ ಗಳನ್ನು ಕತ್ತರಿಸಲಾಗುತ್ತಿತ್ತು. ಇವರನ್ನು ಭಾನುಮೋಹನ್ ತಡೆದು ಅರಣ್ಯ ಇಲಾಖೆಗೆ ಮಾಹಿತಿ ನೀಡುವಷ್ಟರಲ್ಲಿ 3 ಮರಗಳನ್ನು ಸಂಪೂರ್ಣ ಕರ್ತರಿಸ ಲಾಗಿತ್ತು. ಸ್ಥಳಕ್ಕೆ ಬಂದ ಅರಣ್ಯಾಧಿಕಾರಿ ಗಳು ಅನುಮತಿ ಪಡೆದಿಲ್ಲ ಎಂದು ಹೇಳಿ ಸಹಾಯಕ ಎಂಜಿನಿಯರ್ ಅಕ್ಷತಾ, ವಾಟರ್ ಇನ್ಸ್ಪೆಕ್ಟರ್ ಮಹದೇವು ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ.</p>.<p>ಈ ಕುರಿತು ಪ್ರತಿಕ್ರಿಯಿಸಿದ ಉಪವಲಯ ಅರಣ್ಯಾಧಿಕಾರಿ ಮಂಜು, ಈ ಸಂಬಂಧ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.</p>.<p class="Briefhead"><strong>ಮಹಿಳೆ ಆತ್ಮಹತ್ಯೆ</strong></p>.<p>ಮೈಸೂರು: ಇಲ್ಲಿನ ಕನಕಗಿರಿ ನಿವಾಸಿ ಮಹದೇವಮ್ಮ (45) ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಇವರಿಗೆ ಮೂರ್ಛೆ ಕಾಯಿಲೆ ಇತ್ತು. ಇದರಿಂದ ಬೇಸರಗೊಂಡು ಧಾನ್ಯಗಳಿಗೆ ಹುಳು ಬಾರದಂತೆ ತಡೆಯುವ ಮಾತ್ರಗಳನ್ನು ಸೇವಿಸಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ವಿದ್ಯಾರಣ್ಯಪುರಂ ಠಾಣೆಯಲ್ಲಿ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಅರಣ್ಯ ಇಲಾಖೆಯ ಅನುಮತಿ ಪಡೆಯದೇ ಉದ್ಯಾನದಲ್ಲಿದ್ದ 3 ಮರಗಳನ್ನು ಕತ್ತರಿಸಿದ ವಾಣಿವಿಲಾಸ ನೀರು ಸರಬರಾಜು ಕೇಂದ್ರದ ಇಬ್ಬರು ಅಧಿಕಾರಿಗಳ ವಿರುದ್ಧ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಪರಿಸರವಾದಿ ಭಾನು ಮೋಹನ್ ಅವರು ದೂರು ನೀಡಿದ್ದರು.</p>.<p>ಬೃಂದಾವನ ಬಡಾವಣೆಯಲ್ಲಿರುವ ಉದ್ಯಾನದಲ್ಲಿ ಶುದ್ಧ ಕುಡಿಯುವ ನೀರಿನ ಘಟಕದ ಸ್ಥಾಪನೆಗಾಗಿ ಒಟ್ಟು 4 ಮರ ಗಳನ್ನು ಕತ್ತರಿಸಲಾಗುತ್ತಿತ್ತು. ಇವರನ್ನು ಭಾನುಮೋಹನ್ ತಡೆದು ಅರಣ್ಯ ಇಲಾಖೆಗೆ ಮಾಹಿತಿ ನೀಡುವಷ್ಟರಲ್ಲಿ 3 ಮರಗಳನ್ನು ಸಂಪೂರ್ಣ ಕರ್ತರಿಸ ಲಾಗಿತ್ತು. ಸ್ಥಳಕ್ಕೆ ಬಂದ ಅರಣ್ಯಾಧಿಕಾರಿ ಗಳು ಅನುಮತಿ ಪಡೆದಿಲ್ಲ ಎಂದು ಹೇಳಿ ಸಹಾಯಕ ಎಂಜಿನಿಯರ್ ಅಕ್ಷತಾ, ವಾಟರ್ ಇನ್ಸ್ಪೆಕ್ಟರ್ ಮಹದೇವು ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ.</p>.<p>ಈ ಕುರಿತು ಪ್ರತಿಕ್ರಿಯಿಸಿದ ಉಪವಲಯ ಅರಣ್ಯಾಧಿಕಾರಿ ಮಂಜು, ಈ ಸಂಬಂಧ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.</p>.<p class="Briefhead"><strong>ಮಹಿಳೆ ಆತ್ಮಹತ್ಯೆ</strong></p>.<p>ಮೈಸೂರು: ಇಲ್ಲಿನ ಕನಕಗಿರಿ ನಿವಾಸಿ ಮಹದೇವಮ್ಮ (45) ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಇವರಿಗೆ ಮೂರ್ಛೆ ಕಾಯಿಲೆ ಇತ್ತು. ಇದರಿಂದ ಬೇಸರಗೊಂಡು ಧಾನ್ಯಗಳಿಗೆ ಹುಳು ಬಾರದಂತೆ ತಡೆಯುವ ಮಾತ್ರಗಳನ್ನು ಸೇವಿಸಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ವಿದ್ಯಾರಣ್ಯಪುರಂ ಠಾಣೆಯಲ್ಲಿ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>