<p><strong>ಮೈಸೂರು: </strong>ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಂಡಿಸಿರುವ ಪೌರತ್ವ (ತಿದ್ದುಪಡಿ) ಕಾಯ್ದೆ ಬೆಂಬಲಿಸಿ ಮೈಸೂರು ನಗರದಲ್ಲಿ ಡಿ.22ರ ಭಾನುವಾರ ಬೃಹತ್ ಮೆರವಣಿಗೆಯನ್ನು ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮುಖಂಡರೂ ಆಗಿರುವ ನವಜೀವನ ಸಂಸ್ಥೆಯ ಬಿ.ಪಿ.ಮಂಜುನಾಥ್ ತಿಳಿಸಿದರು.</p>.<p>ಹೊರದೇಶದಿಂದ ಬಂದು ಭಾರತಲ್ಲಿ ನೆಲೆಸಿರುವ ಅಕ್ರಮ ವಲಸಿಗರ ವಿರುದ್ಧ ಕ್ರಮಕ್ಕಾಗಿ ಈ ಕಾಯ್ದೆ ಜಾರಿಗೊಳಿಸಲಾಗಿದೆ. ಆದರೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಜನರಲ್ಲಿ ಗೊಂದಲ ಮೂಡಿಸುವ ಮೂಲಕ, ಇದು ಕೇವಲ ಮುಸ್ಲಿಮರಿಗೆ ಮಾತ್ರ ತೊಂದರೆ ನೀಡಲಿದೆ ಎಂದು ಅಪಪ್ರಚಾರ ನಡೆಸಿದ್ದಾರೆ. ಈ ಕಾಯ್ದೆಯಿಂದ ದೇಶದೊಳಗಿನ ಮುಸ್ಲಿಮರಿಗೆ ಯಾವುದೇ ಸಮಸ್ಯೆಯಿಲ್ಲ. ಪಾಕಿಸ್ತಾನ, ಆಪ್ಘಾನಿಸ್ತಾನ, ಬಾಂಗ್ಲಾದೇಶದಿಂದ ಬರುವ ಮುಸ್ಲಿಮರಿಗಷ್ಟೇ ಇದು ಅನ್ವಯವಾಗಲಿದೆ ಎಂದು ಶುಕ್ರವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>ಪೊಲೀಸರಿಂದ ಅನುಮತಿ ಪಡೆದು, ಶಾಂತಿಯುತವಾಗಿ ಮೆರವಣಿಗೆ ನಡೆಸುತ್ತೇವೆ. ಜಾತ್ಯತೀತವಾಗಿ, ಪಕ್ಷಾತೀತವಾಗಿ ಎಲ್ಲರನ್ನೂ ಆಹ್ವಾನಿಸಿದ್ದೇವೆ. ಎರಡು ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಪೌರತ್ವ ಕಾಯಿದೆ ಕುರಿತು ನಾವು ಮಾತನಾಡದಿದ್ದರೆ ತಪ್ಪು ಸಂದೇಶ ರವಾನೆಯಾಗಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>‘ಪೌರತ್ವ ಕಾಯ್ದೆ ಸಂಬಂಧ ಡಿ.19ರಂದು ಹಮ್ಮಿಕೊಂಡಿದ್ದ ಪ್ರತಿಭಟನೆಗೆ ತಡೆಯೊಡ್ಡಿದರೆ ಬೆಂಕಿ ಹತ್ತಿ ಉರಿಯುತ್ತಿದೆ ಎಂದಿದ್ದ ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಹೇಳಿಕೆ ಸರಿಯಲ್ಲ. ಇದಕ್ಕೆ ಇಬ್ಬರು ಅಲ್ಪಸಂಖ್ಯಾತರು ಬಲಿಯಾಗಿದ್ದಾರೆ. ಇದು ನಿಜಕ್ಕೂ ಖಂಡನಾರ್ಹ. ಇದರ ಹೊಣೆಯನ್ನು ಅವರೇ ಹೊರಬೇಕು’ ಎಂದು ಹೇಳಿದರು.</p>.<p>ರಾಮು, ಭಾನುಪ್ರಕಾಶ್, ಜಮಾಲ್ ಷರೀಪ್, ಆನಂದ್, ಪ್ರಕಾಶ್ ಜೈನ್ ಪತ್ರಿಕಾಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಂಡಿಸಿರುವ ಪೌರತ್ವ (ತಿದ್ದುಪಡಿ) ಕಾಯ್ದೆ ಬೆಂಬಲಿಸಿ ಮೈಸೂರು ನಗರದಲ್ಲಿ ಡಿ.22ರ ಭಾನುವಾರ ಬೃಹತ್ ಮೆರವಣಿಗೆಯನ್ನು ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮುಖಂಡರೂ ಆಗಿರುವ ನವಜೀವನ ಸಂಸ್ಥೆಯ ಬಿ.ಪಿ.ಮಂಜುನಾಥ್ ತಿಳಿಸಿದರು.</p>.<p>ಹೊರದೇಶದಿಂದ ಬಂದು ಭಾರತಲ್ಲಿ ನೆಲೆಸಿರುವ ಅಕ್ರಮ ವಲಸಿಗರ ವಿರುದ್ಧ ಕ್ರಮಕ್ಕಾಗಿ ಈ ಕಾಯ್ದೆ ಜಾರಿಗೊಳಿಸಲಾಗಿದೆ. ಆದರೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಜನರಲ್ಲಿ ಗೊಂದಲ ಮೂಡಿಸುವ ಮೂಲಕ, ಇದು ಕೇವಲ ಮುಸ್ಲಿಮರಿಗೆ ಮಾತ್ರ ತೊಂದರೆ ನೀಡಲಿದೆ ಎಂದು ಅಪಪ್ರಚಾರ ನಡೆಸಿದ್ದಾರೆ. ಈ ಕಾಯ್ದೆಯಿಂದ ದೇಶದೊಳಗಿನ ಮುಸ್ಲಿಮರಿಗೆ ಯಾವುದೇ ಸಮಸ್ಯೆಯಿಲ್ಲ. ಪಾಕಿಸ್ತಾನ, ಆಪ್ಘಾನಿಸ್ತಾನ, ಬಾಂಗ್ಲಾದೇಶದಿಂದ ಬರುವ ಮುಸ್ಲಿಮರಿಗಷ್ಟೇ ಇದು ಅನ್ವಯವಾಗಲಿದೆ ಎಂದು ಶುಕ್ರವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>ಪೊಲೀಸರಿಂದ ಅನುಮತಿ ಪಡೆದು, ಶಾಂತಿಯುತವಾಗಿ ಮೆರವಣಿಗೆ ನಡೆಸುತ್ತೇವೆ. ಜಾತ್ಯತೀತವಾಗಿ, ಪಕ್ಷಾತೀತವಾಗಿ ಎಲ್ಲರನ್ನೂ ಆಹ್ವಾನಿಸಿದ್ದೇವೆ. ಎರಡು ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಪೌರತ್ವ ಕಾಯಿದೆ ಕುರಿತು ನಾವು ಮಾತನಾಡದಿದ್ದರೆ ತಪ್ಪು ಸಂದೇಶ ರವಾನೆಯಾಗಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>‘ಪೌರತ್ವ ಕಾಯ್ದೆ ಸಂಬಂಧ ಡಿ.19ರಂದು ಹಮ್ಮಿಕೊಂಡಿದ್ದ ಪ್ರತಿಭಟನೆಗೆ ತಡೆಯೊಡ್ಡಿದರೆ ಬೆಂಕಿ ಹತ್ತಿ ಉರಿಯುತ್ತಿದೆ ಎಂದಿದ್ದ ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಹೇಳಿಕೆ ಸರಿಯಲ್ಲ. ಇದಕ್ಕೆ ಇಬ್ಬರು ಅಲ್ಪಸಂಖ್ಯಾತರು ಬಲಿಯಾಗಿದ್ದಾರೆ. ಇದು ನಿಜಕ್ಕೂ ಖಂಡನಾರ್ಹ. ಇದರ ಹೊಣೆಯನ್ನು ಅವರೇ ಹೊರಬೇಕು’ ಎಂದು ಹೇಳಿದರು.</p>.<p>ರಾಮು, ಭಾನುಪ್ರಕಾಶ್, ಜಮಾಲ್ ಷರೀಪ್, ಆನಂದ್, ಪ್ರಕಾಶ್ ಜೈನ್ ಪತ್ರಿಕಾಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>