ಹೊರದೇಶದಿಂದ ಬಂದು ಭಾರತಲ್ಲಿ ನೆಲೆಸಿರುವ ಅಕ್ರಮ ವಲಸಿಗರ ವಿರುದ್ಧ ಕ್ರಮಕ್ಕಾಗಿ ಈ ಕಾಯ್ದೆ ಜಾರಿಗೊಳಿಸಲಾಗಿದೆ. ಆದರೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಜನರಲ್ಲಿ ಗೊಂದಲ ಮೂಡಿಸುವ ಮೂಲಕ, ಇದು ಕೇವಲ ಮುಸ್ಲಿಮರಿಗೆ ಮಾತ್ರ ತೊಂದರೆ ನೀಡಲಿದೆ ಎಂದು ಅಪಪ್ರಚಾರ ನಡೆಸಿದ್ದಾರೆ. ಈ ಕಾಯ್ದೆಯಿಂದ ದೇಶದೊಳಗಿನ ಮುಸ್ಲಿಮರಿಗೆ ಯಾವುದೇ ಸಮಸ್ಯೆಯಿಲ್ಲ. ಪಾಕಿಸ್ತಾನ, ಆಪ್ಘಾನಿಸ್ತಾನ, ಬಾಂಗ್ಲಾದೇಶದಿಂದ ಬರುವ ಮುಸ್ಲಿಮರಿಗಷ್ಟೇ ಇದು ಅನ್ವಯವಾಗಲಿದೆ ಎಂದು ಶುಕ್ರವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.