<p><strong>ಪಿರಿಯಾಪಟ್ಟಣ:</strong> ಕೇಂದ್ರ ಮತ್ತು ರಾಜ್ಯ ಸರ್ಕಾರ ವಿದ್ಯುತ್ ಖಾಸಗೀಕರಣ ಮಾಡಲು ಮುಂದಾಗಿರುವ ಕ್ರಮವನ್ನು ಖಂಡಿಸಿ ಪಟ್ಟಣದಲ್ಲಿ ಸೆಸ್ಕ್ನ ಸಿಬ್ಬಂದಿ ಕಪ್ಪುಪಟ್ಟಿ ಧರಿಸಿ ಸೋಮವಾರ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.</p>.<p>ಕಚೇರಿ ಮುಂಭಾಗ ಜಮಾವಣೆಗೊಂಡ ಅಧಿಕಾರಿಗಳು ಮತ್ತು ನೌಕರರು ವಿದ್ಯುತ್ ಖಾಸಗೀಕರಣಕ್ಕೆ ಮುಂದಾಗಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಈ ಸಂದರ್ಭದಲ್ಲಿ ಸೆಸ್ಕ್ ಸಿಬ್ಬಂದಿ ಹಾಗೂ ಇಲಾಖಾ ನೌಕರರ ಸಂಘಟನೆಯ ಮುಖಂಡ ಜಗದೀಶ್ ಮಾತನಾಡಿ, ಹಲವು ವರ್ಷಗಳ ಇತಿಹಾಸ ಇರುವ ವಿದ್ಯುತ್ ನಿಗಮವನ್ನು ಏಕಾಏಕಿ ಖಾಸಗೀಕರಣಗೊಳಿಸಿ ನೌಕರರ ಹಾಗೂ ಅಧಿಕಾರಿಗಳ ಬದುಕನ್ನು ಕಿತ್ತುಕೊಳ್ಳಲು ಮುಂದಾಗಿರುವ ಸರ್ಕಾರದ ವಿರುದ್ಧ ಕಿಡಿ ಕಾರಿದರು.</p>.<p>ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿದ್ದಲ್ಲದೆ ಈ ಕಾಯ್ದೆಯಿಂದಾಗಿ ಗ್ರಾಹಕರು, ಬಡಜನರು, ರೈತರು ಹಾಗೂ ಸಾರ್ವಜನಿಕರಿಗೆ ಅನಾನುಕೂಲವಾಗಲಿದ್ದು ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪದೆ ಕೇವಲ ಉಳ್ಳವರ ಪಾಲಾಗುತ್ತದೆ ಎಂದು ಆರೋಪಿಸಿದರು.</p>.<p>‘ರೈತರ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ ನಿಲುಗಡೆಯಾಗಲಿದೆ. ಭಾಗ್ಯಜ್ಯೋತಿ ಮತ್ತು ಕುಟೀರ ಜ್ಯೋತಿ ಯೋಜನೆ ಸ್ಥಗಿತಗೊಳ್ಳಲಿದೆ. ಸಣ್ಣ ಕೈಗಾರಿಕೆ ಮತ್ತು ಗುಡಿ ಕೈಗಾರಿಕೆಗಳಿಗೆ ಮಾರಕವಾಗಲಿದೆ, ಜನ ಸಾಮಾನ್ಯರಿಗೆ ವಿದ್ಯುತ್ ದರ ಏರಿಕೆಯ ಬಿಸಿ ತಟ್ಟಲಿದೆ ಎಂದರು.</p>.<p>ಸಾರ್ವಜನಿಕ ಸೇವೆಯು ಬಂಡವಾಳಶಾಹಿಗಳ ಅಧೀನಕ್ಕೆ ಒಳಪಟ್ಟು ಸ್ವಯಂ ಘೋಷಿತ ಕಾನೂನುಗಳಿಗೆ ಒಳಪಡುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ಖಾಸಗೀಕರಣದಿಂದ ಲಕ್ಷಾಂತರ ಕಾರ್ಮಿಕರ ಬದುಕು ಬೀದಿ ಪಾಲಾಗುತ್ತಿದ್ದು ಕೂಡಲೇ ಕಾಯ್ದೆಯನ್ನು ಹಿಂಪಡೆಯುವಂತೆ ಒತ್ತಾಯಿಸಿದರು.</p>.<p>ಇಂದು ರಾಜ್ಯದಾದ್ಯಂತ ಸಾಂಕೇತಿಕವಾಗಿ ಪ್ರತಿಭಟನೆ ಕೈಗೊಳ್ಳಲಾಗಿದ್ದು ಸರ್ಕಾರ ಕೂಡಲೇ ಹಿಂಪಡೆಯದಿದ್ದಲ್ಲಿ ಮುಂದಿನ ದಿನಗಳಲ್ಲಿ ಪ್ರತಿಭಟನೆಯು ಉಗ್ರರೂಪ ತಾಳಲಿದೆ ಎಂದು ಎಚ್ಚರಿಸಿದರು.</p>.<p>ಈ ಸಂದರ್ಭದಲ್ಲಿ ಸಹಾಯಕ ಎಂಜಿನಿಯರ್ ಶಶಿಕುಮಾರ್, ಸಿಬ್ಬಂದಿ ಸ್ವಾಮಿ, ಲೋಕೇಶ್, ಕವಿತಾ, ಖಾಸಿಂ, ಕೃಷ್ಣ, ಸದ್ದಾಂ, ಮೂರ್ತಿ, ಮಂಜುನಾಥ್, ಪ್ರಭಾಕರ್, ನಾಗರಾಜ್, ಬ್ರಹ್ಮ, ಧರಣೀಶ್, ಸುನಿಲ್, ಶಿವಾನಂದ, ಮಧುಸೂದನ್, ಹನುಮಂತ ರವಿ, ಮೆಹಬೂಬ್ ಹಾಗೂ ಇಲಾಖೆ ಎಲ್ಲಾ ಅಧಿಕಾರಿಗಳು ಮತ್ತು ನೌಕರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಿರಿಯಾಪಟ್ಟಣ:</strong> ಕೇಂದ್ರ ಮತ್ತು ರಾಜ್ಯ ಸರ್ಕಾರ ವಿದ್ಯುತ್ ಖಾಸಗೀಕರಣ ಮಾಡಲು ಮುಂದಾಗಿರುವ ಕ್ರಮವನ್ನು ಖಂಡಿಸಿ ಪಟ್ಟಣದಲ್ಲಿ ಸೆಸ್ಕ್ನ ಸಿಬ್ಬಂದಿ ಕಪ್ಪುಪಟ್ಟಿ ಧರಿಸಿ ಸೋಮವಾರ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.</p>.<p>ಕಚೇರಿ ಮುಂಭಾಗ ಜಮಾವಣೆಗೊಂಡ ಅಧಿಕಾರಿಗಳು ಮತ್ತು ನೌಕರರು ವಿದ್ಯುತ್ ಖಾಸಗೀಕರಣಕ್ಕೆ ಮುಂದಾಗಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಈ ಸಂದರ್ಭದಲ್ಲಿ ಸೆಸ್ಕ್ ಸಿಬ್ಬಂದಿ ಹಾಗೂ ಇಲಾಖಾ ನೌಕರರ ಸಂಘಟನೆಯ ಮುಖಂಡ ಜಗದೀಶ್ ಮಾತನಾಡಿ, ಹಲವು ವರ್ಷಗಳ ಇತಿಹಾಸ ಇರುವ ವಿದ್ಯುತ್ ನಿಗಮವನ್ನು ಏಕಾಏಕಿ ಖಾಸಗೀಕರಣಗೊಳಿಸಿ ನೌಕರರ ಹಾಗೂ ಅಧಿಕಾರಿಗಳ ಬದುಕನ್ನು ಕಿತ್ತುಕೊಳ್ಳಲು ಮುಂದಾಗಿರುವ ಸರ್ಕಾರದ ವಿರುದ್ಧ ಕಿಡಿ ಕಾರಿದರು.</p>.<p>ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿದ್ದಲ್ಲದೆ ಈ ಕಾಯ್ದೆಯಿಂದಾಗಿ ಗ್ರಾಹಕರು, ಬಡಜನರು, ರೈತರು ಹಾಗೂ ಸಾರ್ವಜನಿಕರಿಗೆ ಅನಾನುಕೂಲವಾಗಲಿದ್ದು ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪದೆ ಕೇವಲ ಉಳ್ಳವರ ಪಾಲಾಗುತ್ತದೆ ಎಂದು ಆರೋಪಿಸಿದರು.</p>.<p>‘ರೈತರ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ ನಿಲುಗಡೆಯಾಗಲಿದೆ. ಭಾಗ್ಯಜ್ಯೋತಿ ಮತ್ತು ಕುಟೀರ ಜ್ಯೋತಿ ಯೋಜನೆ ಸ್ಥಗಿತಗೊಳ್ಳಲಿದೆ. ಸಣ್ಣ ಕೈಗಾರಿಕೆ ಮತ್ತು ಗುಡಿ ಕೈಗಾರಿಕೆಗಳಿಗೆ ಮಾರಕವಾಗಲಿದೆ, ಜನ ಸಾಮಾನ್ಯರಿಗೆ ವಿದ್ಯುತ್ ದರ ಏರಿಕೆಯ ಬಿಸಿ ತಟ್ಟಲಿದೆ ಎಂದರು.</p>.<p>ಸಾರ್ವಜನಿಕ ಸೇವೆಯು ಬಂಡವಾಳಶಾಹಿಗಳ ಅಧೀನಕ್ಕೆ ಒಳಪಟ್ಟು ಸ್ವಯಂ ಘೋಷಿತ ಕಾನೂನುಗಳಿಗೆ ಒಳಪಡುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ಖಾಸಗೀಕರಣದಿಂದ ಲಕ್ಷಾಂತರ ಕಾರ್ಮಿಕರ ಬದುಕು ಬೀದಿ ಪಾಲಾಗುತ್ತಿದ್ದು ಕೂಡಲೇ ಕಾಯ್ದೆಯನ್ನು ಹಿಂಪಡೆಯುವಂತೆ ಒತ್ತಾಯಿಸಿದರು.</p>.<p>ಇಂದು ರಾಜ್ಯದಾದ್ಯಂತ ಸಾಂಕೇತಿಕವಾಗಿ ಪ್ರತಿಭಟನೆ ಕೈಗೊಳ್ಳಲಾಗಿದ್ದು ಸರ್ಕಾರ ಕೂಡಲೇ ಹಿಂಪಡೆಯದಿದ್ದಲ್ಲಿ ಮುಂದಿನ ದಿನಗಳಲ್ಲಿ ಪ್ರತಿಭಟನೆಯು ಉಗ್ರರೂಪ ತಾಳಲಿದೆ ಎಂದು ಎಚ್ಚರಿಸಿದರು.</p>.<p>ಈ ಸಂದರ್ಭದಲ್ಲಿ ಸಹಾಯಕ ಎಂಜಿನಿಯರ್ ಶಶಿಕುಮಾರ್, ಸಿಬ್ಬಂದಿ ಸ್ವಾಮಿ, ಲೋಕೇಶ್, ಕವಿತಾ, ಖಾಸಿಂ, ಕೃಷ್ಣ, ಸದ್ದಾಂ, ಮೂರ್ತಿ, ಮಂಜುನಾಥ್, ಪ್ರಭಾಕರ್, ನಾಗರಾಜ್, ಬ್ರಹ್ಮ, ಧರಣೀಶ್, ಸುನಿಲ್, ಶಿವಾನಂದ, ಮಧುಸೂದನ್, ಹನುಮಂತ ರವಿ, ಮೆಹಬೂಬ್ ಹಾಗೂ ಇಲಾಖೆ ಎಲ್ಲಾ ಅಧಿಕಾರಿಗಳು ಮತ್ತು ನೌಕರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>