‘ಶಾಸ್ತ್ರೀಯ ಕನ್ನಡ ಕೇಂದ್ರಕ್ಕೆ ಸ್ವಾಯತ್ತತೆ ದೊರಕಿಸಿಕೊಡಲು ಹಲವು ವರ್ಷಗಳಿಂದ ಪ್ರಯತ್ನ ನಡೆಯುತ್ತಿದೆ. ಈ ಬೆಳವಣಿಗೆಗಳ ಮಾಹಿತಿಯ ಕೊರತೆಯಿಂದಾಗಿ, ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯವರು ವಿಶ್ವವಿದ್ಯಾಲಯಕ್ಕೆ ಪತ್ರ ಬರೆದಿದ್ದಾರೆ. ಆದ್ದರಿಂದ, ಈ ವಿಷಯದಲ್ಲಿ ಮಧ್ಯಪ್ರವೇಶಿಸಿ ಆದೇಶ ಪತ್ರವನ್ನು ಹಿಂಪಡೆಯಲು ನಿರ್ದೇಶಿಸಬೇಕು’ ಎಂದು ನಾಗಾಭರಣ ಅವರು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರಿಗೆ ಬರೆದ ಪತ್ರದಲ್ಲಿ ಆಗ್ರಹಿಸಿದ್ದಾರೆ.