ವಿಜ್ಞಾನ ಪ್ರಸಾರ್ನ ವಿಜ್ಞಾನಿ ಡಾ.ಟಿ.ವಿ.ವೆಂಕಟೇಶ್ವರನ್ ಮಾತನಾಡಿ, ‘ಭಾರತೀಯ ಭಾಷೆಗಳಲ್ಲಿ ವಿಜ್ಞಾನದ ವಿಷಯಗಳನ್ನು ಪ್ರಚುರ ಪಡಿಸುವ ಕೆಲಸವನ್ನು ವಿಜ್ಞಾನ ಪ್ರಸಾರ್ ಮಾಡುತ್ತಿದೆ. 1990ರ ದಶಕದಲ್ಲಿ ಮೂಲ ವಿಜ್ಞಾನವನ್ನು ಓದುವವರ ಸಂಖ್ಯೆ ಹೆಚ್ಚಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಭೌತ ವಿಜ್ಞಾನ, ರಸಾಯನವಿಜ್ಞಾನ, ಜೀವಶಾಸ್ತ್ರ ಮುಂತಾದ ಮೂಲ ವಿಜ್ಞಾನದ ವಿಷಯಗಳನ್ನು ಓದುವವರ ಸಂಖ್ಯೆ ಕುಸಿಯುತ್ತಿದೆ’ ಎಂದು ಅಭಿಪ್ರಾಯಪಟ್ಟರು.