ಮೈಸೂರು: ಇಲ್ಲಿನ ಶ್ರೀರಾಂಪುರ ಬಡಾವಣೆಯ 2ನೇ ಹಂತದ ಮಧುವನ ಬಡಾವಣೆಯ ವಿವೇಕ ವಿದ್ಯಾಲಯದ ಸಮೀಪದ ಕ್ರಾಸ್ ರಸ್ತೆಯಲ್ಲಿ ಮಂಗಳವಾರ ಸಂಜೆ ಸ್ಕೂಟರ್ನಲ್ಲಿ ತೆರಳುತ್ತಿದ್ದ ಎಲ್ಐಸಿ ಕಾಲೊನಿಯ ಗಾಯತ್ರಿದೇವಿ ಎಂಬುವವರ ಕುತ್ತಿಗೆಯಲ್ಲಿದ್ದ ಎರಡು ಸರಗಳನ್ನು ಇಬ್ಬರು ಕಿತ್ತುಕೊಂಡು ಪರಾರಿಯಾಗಿದ್ದಾರೆ.
ನಂಬರ್ ಪ್ಲೇಟ್ ಇಲ್ಲದ ಸ್ಕೂಟರ್ನಲ್ಲಿ ಬಂದ ಇಬ್ಬರು 40 ಗ್ರಾಂ ತೂಕದ ಮಾಂಗಲ್ಯ ಸರ ಹಾಗೂ 20 ಗ್ರಾಂ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಹೋಗಿದ್ದಾರೆ. ಪ್ರಕರಣ ಕುವೆಂಪುನಗರ ಠಾಣೆಯಲ್ಲಿ ದಾಖಲಾಗಿದೆ.