<p><strong>ಮೈಸೂರು: </strong>ನಗರದಲ್ಲಿ ಸರಗಳ್ಳತನ ಮುಂದುವರೆದಿದೆ. ಈ ಬಾರಿ ಕೆ.ಆರ್.ಮೊಹಲ್ಲಾದ ಸೀತಾರಾಮರಾವ್ ರಸ್ತೆಯಲ್ಲಿ ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಸರವನ್ನು ಕಳ್ಳರು ಕಿತ್ತುಕೊಂಡು ಪರಾರಿಯಾಗಿದ್ದಾರೆ.</p>.<p>ಸುಚಿತ್ರಾ ಎಂಬುವರು ರಾತ್ರಿ 9.30ರಲ್ಲಿ ತಮ್ಮ ಮನೆಯ ಸಾಕು ನಾಯಿಯನ್ನು ಕರೆದುಕೊಂಡು ಸೀತಾರಾಮರಾವ್ ರಸ್ತೆಯಲ್ಲಿ ಹೋಗುತ್ತಿರುವಾಗ ಎದುರಿನಿಂದ ಸ್ಕೂಟರ್ನಲ್ಲಿ ಬಂದ ಇಬ್ಬರು ಕುತ್ತಿಗೆಯಲ್ಲಿದ್ದ 40 ಗ್ರಾಂ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಹೋಗಿದ್ದಾರೆ.</p>.<p>ಇವರಲ್ಲಿ ಒಬ್ಬಾತ ಮುಖಕ್ಕೆ ಮಾಸ್ಕ್ ಧರಿಸಿದ್ದರೆ, ಮತ್ತೊಬ್ಬ ಮಂಕಿ ಕ್ಯಾಪ್ ಧರಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಕೆ.ಆರ್.ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಆಗಸ್ಟ್ 12ರಂದು ಜೆ.ಪಿ.ನಗರದ ‘ಡಿ’ ಬ್ಲಾಕ್ನ 18ನೇ ಮುಖ್ಯರಸ್ತೆಯಲ್ಲಿ, 13ರಂದು ಶ್ರೀರಾಂಪುರದ 2ನೇ ಹಂತದ 1ನೇ ಮುಖ್ಯರಸ್ತೆಯಲ್ಲಿ ಇದೇ ಸ್ವರೂಪದಲ್ಲಿ ಸರಗಳ್ಳತನ ನಡೆದಿತ್ತು.</p>.<p class="Briefhead"><strong>ವ್ಯಕ್ತಿ ಆತ್ಮಹತ್ಯೆ</strong></p>.<p>ಮೈಸೂರಿನವಿಜಯನಗರದ ರೈಲ್ವೆ ಬಡಾವಣೆ 18ನೇ ಕ್ರಾಸ್ನ ನಿವಾಸಿ ಸಿದ್ದಪ್ಪಾಜಿ ಅವರು ಮಂಗಳವಾರ ತಮ್ಮ ನಿವಾಸದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಇವರು ಅನಾರೋಗ್ಯದಿಂದ ಬಳಲುತ್ತಿದ್ದುದ್ದರಿಂದ ಬೇಸರಗೊಂಡು ಕಬ್ಬಿಣದ ಕಂಬಿಗೆ ನೇಣು ಹಾಕಿಕೊಂಡಿದ್ದಾರೆ ಎಂದು ವಿಜಯನಗರ ಠಾಣೆಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ನಗರದಲ್ಲಿ ಸರಗಳ್ಳತನ ಮುಂದುವರೆದಿದೆ. ಈ ಬಾರಿ ಕೆ.ಆರ್.ಮೊಹಲ್ಲಾದ ಸೀತಾರಾಮರಾವ್ ರಸ್ತೆಯಲ್ಲಿ ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಸರವನ್ನು ಕಳ್ಳರು ಕಿತ್ತುಕೊಂಡು ಪರಾರಿಯಾಗಿದ್ದಾರೆ.</p>.<p>ಸುಚಿತ್ರಾ ಎಂಬುವರು ರಾತ್ರಿ 9.30ರಲ್ಲಿ ತಮ್ಮ ಮನೆಯ ಸಾಕು ನಾಯಿಯನ್ನು ಕರೆದುಕೊಂಡು ಸೀತಾರಾಮರಾವ್ ರಸ್ತೆಯಲ್ಲಿ ಹೋಗುತ್ತಿರುವಾಗ ಎದುರಿನಿಂದ ಸ್ಕೂಟರ್ನಲ್ಲಿ ಬಂದ ಇಬ್ಬರು ಕುತ್ತಿಗೆಯಲ್ಲಿದ್ದ 40 ಗ್ರಾಂ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಹೋಗಿದ್ದಾರೆ.</p>.<p>ಇವರಲ್ಲಿ ಒಬ್ಬಾತ ಮುಖಕ್ಕೆ ಮಾಸ್ಕ್ ಧರಿಸಿದ್ದರೆ, ಮತ್ತೊಬ್ಬ ಮಂಕಿ ಕ್ಯಾಪ್ ಧರಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಕೆ.ಆರ್.ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಆಗಸ್ಟ್ 12ರಂದು ಜೆ.ಪಿ.ನಗರದ ‘ಡಿ’ ಬ್ಲಾಕ್ನ 18ನೇ ಮುಖ್ಯರಸ್ತೆಯಲ್ಲಿ, 13ರಂದು ಶ್ರೀರಾಂಪುರದ 2ನೇ ಹಂತದ 1ನೇ ಮುಖ್ಯರಸ್ತೆಯಲ್ಲಿ ಇದೇ ಸ್ವರೂಪದಲ್ಲಿ ಸರಗಳ್ಳತನ ನಡೆದಿತ್ತು.</p>.<p class="Briefhead"><strong>ವ್ಯಕ್ತಿ ಆತ್ಮಹತ್ಯೆ</strong></p>.<p>ಮೈಸೂರಿನವಿಜಯನಗರದ ರೈಲ್ವೆ ಬಡಾವಣೆ 18ನೇ ಕ್ರಾಸ್ನ ನಿವಾಸಿ ಸಿದ್ದಪ್ಪಾಜಿ ಅವರು ಮಂಗಳವಾರ ತಮ್ಮ ನಿವಾಸದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>ಇವರು ಅನಾರೋಗ್ಯದಿಂದ ಬಳಲುತ್ತಿದ್ದುದ್ದರಿಂದ ಬೇಸರಗೊಂಡು ಕಬ್ಬಿಣದ ಕಂಬಿಗೆ ನೇಣು ಹಾಕಿಕೊಂಡಿದ್ದಾರೆ ಎಂದು ವಿಜಯನಗರ ಠಾಣೆಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>