ಇಲ್ಲಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ದೇವರಾಜ ವಿಭಾಗದ ಪೊಲೀಸರು 151 ಮಂದಿ ರೌಡಿಗಳು ಹಾಗೂ ಇತರ ಹಳೆಯ ಆರೋಪಿಗಳಿಗೆ, ಎನ್.ಆರ್.ವಿಭಾಗದ ಎಸಿಪಿ ಶಿವಶಂಕರ್ ಅವರ ನೇತೃತ್ವದಲ್ಲಿ ನಗರ ಕೇಂದ್ರ ಕಾರಾಗೃಹದ ಮೈದಾನದಲ್ಲಿ ರೌಡಿಗಳ ಪರೇಡ್ ನಡೆಸಲಾಯಿತು. ಜತೆಗೆ, ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯ ಆವರಣದಲ್ಲಿ ಕೃಷ್ಣರಾಜ ವಿಭಾಗದ ರೌಡಿಗಳನ್ನು ಪರೇಡ್ ನಡೆಸಿ ಎಸಿಪಿ ಪೂರ್ಣಚಂದ್ರ ತೇಜಸ್ವಿ ಎಚ್ಚರಿಕೆ ನೀಡಿದರು.