<p><strong>ಮೈಸೂರು:</strong> ಜಿಲ್ಲೆಯಲ್ಲಿ ಸರಗಳ್ಳತನ ಮುಂದುವರಿದಿದೆ. ಹೆಬ್ಬಾಳದ ಸೂರ್ಯಬೇಕರಿ ಸಮೀಪ ಸಂಜೆ 6 ಗಂಟೆ ಸಮಯದಲ್ಲಿ ಸ್ಕೂಟರ್ನಲ್ಲಿ ಹೋಗುತ್ತಿದ್ದ ಮಂಜುಳಾ (36) ಅವರ ಕುತ್ತಿಗೆಯಲ್ಲಿದ್ದ 70 ಗ್ರಾಂ ತೂಕ ಚಿನ್ನದ ಸರವನ್ನು ಸ್ಕೂಟರ್ನಲ್ಲಿ ಎದುರಿನಿಂದ ಬಂದ ಇಬ್ಬರು ಕಿತ್ತುಕೊಂಡು ಪರಾರಿಯಾಗಿದ್ದಾರೆ.</p>.<p>ಎದುರಿನಿಂದ ಬಂದ ಕಳ್ಳರು ತಮ್ಮ ವಾಹನದ ಹೆಡ್ಲೈಟ್ನ್ನು ಪ್ರಖರವಾಗಿ ಬೆಳಗಿಸಿದರು. ಇದರಿಂದ ಸ್ಕೂಟರ್ನಲ್ಲಿ ಸಾಗುತ್ತಿದ್ದ ಮಂಜುಳಾ ತಮ್ಮ ವಾಹನದ ವೇಗವನ್ನು ಕಡಿಮೆ<br />ಮಾಡಿದರು.</p>.<p>ಈ ವೇಳೆ ಹಿಂಬದಿ ಸವಾರ ಕುತ್ತಿಗೆಗೆ ಕೈಹಾಕಿದಾಗ ಸರವನ್ನು ಮಂಜುಳಾ ಅವರು ಬಿಗಿಯಾಗಿ ಹಿಡಿದುಕೊಂಡಿದ್ದಾರೆ. 90 ಗ್ರಾಂ ತೂಕದ ಸರದಲ್ಲಿ 70 ಗ್ರಾಂನಷ್ಟು ಕಳ್ಳರ ಕೈಸೇರಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಬ್ಬಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ನಂಜನಗೂಡಿನ ಮಹದೇಶ್ವರ ಬಡಾವಣೆ ಸಮೀಪದ ಕುಮಾರ ಬಡಾವಣೆಯ ನಿವಾಸಿ ಗೀತಾ (52) ಮಂಗಳವಾರ ಸಂಬಂಧಿಕರ ಮನೆಯಲ್ಲಿ ಪೂಜಾ ಕಾರ್ಯಕ್ರಮ ಮುಗಿಸಿಕೊಂಡು ವಾಪಸಾಗುವ ವೇಳೆ ಮಹದೇಶ್ವರ ಬಡಾವಣೆ ಮುಖ್ಯ ರಸ್ತೆಯಲ್ಲಿ ಬೈಕಿನಲ್ಲಿ ಬಂದ ಇಬ್ಬರು ಕುತ್ತಿಗೆಯಲ್ಲಿದ್ದ80 ಗ್ರಾಂ ತೂಕದ ಚಿನ್ನದಸರವನ್ನು ಕಿತ್ತುಕೊಂಡುಪರಾರಿಯಾಗಿದ್ದಾರೆ.</p>.<p class="Briefhead"><strong>ದೂರು, ಪ್ರತಿದೂರು ದಾಖಲು</strong></p>.<p><strong>ಮೈಸೂರು: </strong>ಇಲ್ಲಿನ ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಮಹಿಳೆಯೊಬ್ಬರಿಗೆ ವಾಹನ ಚಾಲನಾ ತರಬೇತಿ ಶಾಲೆಯೊಂದರ 7 ಮಂದಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಕುರಿತು ಎನ್.ಆರ್.ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದಕ್ಕೆ ಪ್ರತಿಯಾಗಿ ಶಾಲೆಯ ಮಹಿಳೆಯೊಬ್ಬರು ಜಾತಿನಿಂದನೆ ದೂರನ್ನು ಮಹಿಳಾ ನೌಕರರ ಮೇಲೆ ನೀಡಿದ್ದಾರೆ. ಎರಡೂ ದೂರಿನ ಕುರಿತು ವಿಚಾರಣೆ ಆರಂಭವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಜಿಲ್ಲೆಯಲ್ಲಿ ಸರಗಳ್ಳತನ ಮುಂದುವರಿದಿದೆ. ಹೆಬ್ಬಾಳದ ಸೂರ್ಯಬೇಕರಿ ಸಮೀಪ ಸಂಜೆ 6 ಗಂಟೆ ಸಮಯದಲ್ಲಿ ಸ್ಕೂಟರ್ನಲ್ಲಿ ಹೋಗುತ್ತಿದ್ದ ಮಂಜುಳಾ (36) ಅವರ ಕುತ್ತಿಗೆಯಲ್ಲಿದ್ದ 70 ಗ್ರಾಂ ತೂಕ ಚಿನ್ನದ ಸರವನ್ನು ಸ್ಕೂಟರ್ನಲ್ಲಿ ಎದುರಿನಿಂದ ಬಂದ ಇಬ್ಬರು ಕಿತ್ತುಕೊಂಡು ಪರಾರಿಯಾಗಿದ್ದಾರೆ.</p>.<p>ಎದುರಿನಿಂದ ಬಂದ ಕಳ್ಳರು ತಮ್ಮ ವಾಹನದ ಹೆಡ್ಲೈಟ್ನ್ನು ಪ್ರಖರವಾಗಿ ಬೆಳಗಿಸಿದರು. ಇದರಿಂದ ಸ್ಕೂಟರ್ನಲ್ಲಿ ಸಾಗುತ್ತಿದ್ದ ಮಂಜುಳಾ ತಮ್ಮ ವಾಹನದ ವೇಗವನ್ನು ಕಡಿಮೆ<br />ಮಾಡಿದರು.</p>.<p>ಈ ವೇಳೆ ಹಿಂಬದಿ ಸವಾರ ಕುತ್ತಿಗೆಗೆ ಕೈಹಾಕಿದಾಗ ಸರವನ್ನು ಮಂಜುಳಾ ಅವರು ಬಿಗಿಯಾಗಿ ಹಿಡಿದುಕೊಂಡಿದ್ದಾರೆ. 90 ಗ್ರಾಂ ತೂಕದ ಸರದಲ್ಲಿ 70 ಗ್ರಾಂನಷ್ಟು ಕಳ್ಳರ ಕೈಸೇರಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಬ್ಬಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ನಂಜನಗೂಡಿನ ಮಹದೇಶ್ವರ ಬಡಾವಣೆ ಸಮೀಪದ ಕುಮಾರ ಬಡಾವಣೆಯ ನಿವಾಸಿ ಗೀತಾ (52) ಮಂಗಳವಾರ ಸಂಬಂಧಿಕರ ಮನೆಯಲ್ಲಿ ಪೂಜಾ ಕಾರ್ಯಕ್ರಮ ಮುಗಿಸಿಕೊಂಡು ವಾಪಸಾಗುವ ವೇಳೆ ಮಹದೇಶ್ವರ ಬಡಾವಣೆ ಮುಖ್ಯ ರಸ್ತೆಯಲ್ಲಿ ಬೈಕಿನಲ್ಲಿ ಬಂದ ಇಬ್ಬರು ಕುತ್ತಿಗೆಯಲ್ಲಿದ್ದ80 ಗ್ರಾಂ ತೂಕದ ಚಿನ್ನದಸರವನ್ನು ಕಿತ್ತುಕೊಂಡುಪರಾರಿಯಾಗಿದ್ದಾರೆ.</p>.<p class="Briefhead"><strong>ದೂರು, ಪ್ರತಿದೂರು ದಾಖಲು</strong></p>.<p><strong>ಮೈಸೂರು: </strong>ಇಲ್ಲಿನ ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಮಹಿಳೆಯೊಬ್ಬರಿಗೆ ವಾಹನ ಚಾಲನಾ ತರಬೇತಿ ಶಾಲೆಯೊಂದರ 7 ಮಂದಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಕುರಿತು ಎನ್.ಆರ್.ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದಕ್ಕೆ ಪ್ರತಿಯಾಗಿ ಶಾಲೆಯ ಮಹಿಳೆಯೊಬ್ಬರು ಜಾತಿನಿಂದನೆ ದೂರನ್ನು ಮಹಿಳಾ ನೌಕರರ ಮೇಲೆ ನೀಡಿದ್ದಾರೆ. ಎರಡೂ ದೂರಿನ ಕುರಿತು ವಿಚಾರಣೆ ಆರಂಭವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>