ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘40 ವರ್ಷಗಳ ನನ್ನ ರಾಜಕೀಯ ಜೀವನದಲ್ಲಿ ಏನು ಮಾಡಿದ್ದೇನೆ ಎಂಬುದು ಜನರಿಗೆ ಗೊತ್ತಿದೆ. ನನ್ನ ಸಾಧನೆ ಏನೂ ಇಲ್ಲ ಎಂದು ಹೇಳುವ ನೈತಿಕತೆ ಅವರಿಗಿಲ್ಲ. ಅವರನ್ನು ಸಂಸದರನ್ನಾಗಿ ಮಾಡಿದ್ದು ಯಾರು ಎಂಬುದನ್ನು ನೆನಪಿಸಿಕೊಳ್ಳಲಿ. ಕರ್ನಾಟಕದಲ್ಲಿದ್ದಾಗ ಸಿದ್ದರಾಮಯ್ಯ ಜತೆ, ದೆಹಲಿಗೆ ಹೋದಾಗ ಮಲ್ಲಿಕಾರ್ಜುನ ಖರ್ಗೆ ಜತೆ, ಹೊರಗಿದ್ದಾಗ ಡಿ.ಕೆ.ಶಿವಕುಮಾರ್ ಜತೆ ಗುರುತಿಸಿಕೊಳ್ಳುವ ಧ್ರುವನಾರಾಯಣ ಅವರಿಗೆ ಯಾವ ನೈತಿಕತೆ ಇದೆ’ ಎಂದು ಪ್ರಶ್ನಿಸಿದರು.