<p><strong>ಮೈಸೂರು: </strong>ಇಲ್ಲಿನ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ರಥೋತ್ಸವವು ಗುರುವಾರ ಸರಳವಾಗಿ ನೆರವೇರಿತು. ದೊಡ್ಡರಥದ ಬದಲಿಗೆ ಚಿಕ್ಕರಥದಲ್ಲಿ ಉತ್ಸವಮೂರ್ತಿಯನ್ನು ಇರಿಸಿದ ಮೆರವಣಿಗೆಗೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಚಾಲನೆ ನೀಡಿದರು.</p>.<p>ಪ್ರತಿಬಾರಿಯೂ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ನಡೆಯುತ್ತಿದ್ದ ರಥೋತ್ಸವಕ್ಕೆ ಈ ಬಾರಿ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿತ್ತು. ಚಾಮುಂಡಿಬೆಟ್ಟ ಹಾಗೂ ಸುತ್ತಮುತ್ತಲ ಗ್ರಾಮಗಳ ಗ್ರಾಮಸ್ಥರಷ್ಟೇ ರಥೋತ್ಸವದಲ್ಲಿ ಇದ್ದರು. ಹಲವು ಮಂದಿ ಗುಂಪುಗುಂಪಾಗಿದ್ದ ದೃಶ್ಯಗಳು ಕಂಡು ಬಂದವು.</p>.<p>‘ಸಂಪ್ರದಾಯದಂತೆ ಯಾವುದೇ ಲೋಪದೋಷಗಳಿಲ್ಲದೇ ಕಾರ್ಯಕ್ರಮ ಮಾಡಿದ್ದೇವೆ. ಈ ಬಾರಿ ತೆಪ್ಪೋತ್ಸವ ಇರುವುದಿಲ್ಲ’ ಎಂದು ದೇಗುಲದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ತಿಳಿಸಿದರು.</p>.<p>ಈ ವೇಳೆ ಪ್ರತಿಕ್ರಿಯಿಸಿದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ‘ಕೊರೊನಾ ಕಾಲದ ಅಗತ್ಯಕ್ಕೆ ತಕ್ಕಂತೆ ಸರಳವಾಗಿ, ಸಾಂಪ್ರದಾಯಿಕವಾಗಿ ರಥೋತ್ಸವ ನಡೆದಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಇಲ್ಲಿನ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ರಥೋತ್ಸವವು ಗುರುವಾರ ಸರಳವಾಗಿ ನೆರವೇರಿತು. ದೊಡ್ಡರಥದ ಬದಲಿಗೆ ಚಿಕ್ಕರಥದಲ್ಲಿ ಉತ್ಸವಮೂರ್ತಿಯನ್ನು ಇರಿಸಿದ ಮೆರವಣಿಗೆಗೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಚಾಲನೆ ನೀಡಿದರು.</p>.<p>ಪ್ರತಿಬಾರಿಯೂ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ನಡೆಯುತ್ತಿದ್ದ ರಥೋತ್ಸವಕ್ಕೆ ಈ ಬಾರಿ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿತ್ತು. ಚಾಮುಂಡಿಬೆಟ್ಟ ಹಾಗೂ ಸುತ್ತಮುತ್ತಲ ಗ್ರಾಮಗಳ ಗ್ರಾಮಸ್ಥರಷ್ಟೇ ರಥೋತ್ಸವದಲ್ಲಿ ಇದ್ದರು. ಹಲವು ಮಂದಿ ಗುಂಪುಗುಂಪಾಗಿದ್ದ ದೃಶ್ಯಗಳು ಕಂಡು ಬಂದವು.</p>.<p>‘ಸಂಪ್ರದಾಯದಂತೆ ಯಾವುದೇ ಲೋಪದೋಷಗಳಿಲ್ಲದೇ ಕಾರ್ಯಕ್ರಮ ಮಾಡಿದ್ದೇವೆ. ಈ ಬಾರಿ ತೆಪ್ಪೋತ್ಸವ ಇರುವುದಿಲ್ಲ’ ಎಂದು ದೇಗುಲದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ತಿಳಿಸಿದರು.</p>.<p>ಈ ವೇಳೆ ಪ್ರತಿಕ್ರಿಯಿಸಿದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ‘ಕೊರೊನಾ ಕಾಲದ ಅಗತ್ಯಕ್ಕೆ ತಕ್ಕಂತೆ ಸರಳವಾಗಿ, ಸಾಂಪ್ರದಾಯಿಕವಾಗಿ ರಥೋತ್ಸವ ನಡೆದಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>