ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ಸರಳವಾಗಿ ನೆರವೇರಿದ ಚಾಮುಂಡೇಶ್ವರಿ ರಥೋತ್ಸವ

Last Updated 29 ಅಕ್ಟೋಬರ್ 2020, 13:35 IST
ಅಕ್ಷರ ಗಾತ್ರ

ಮೈಸೂರು: ಇಲ್ಲಿನ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ರಥೋತ್ಸವವು ಗುರುವಾರ ಸರಳವಾಗಿ ನೆರವೇರಿತು. ದೊಡ್ಡರಥದ ಬದಲಿಗೆ ಚಿಕ್ಕರಥದಲ್ಲಿ ಉತ್ಸವಮೂರ್ತಿಯನ್ನು ಇರಿಸಿದ ಮೆರವಣಿಗೆಗೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಚಾಲನೆ ನೀಡಿದರು.

ಪ್ರತಿಬಾರಿಯೂ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ನಡೆಯುತ್ತಿದ್ದ ರಥೋತ್ಸವಕ್ಕೆ ಈ ಬಾರಿ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿತ್ತು. ಚಾಮುಂಡಿಬೆಟ್ಟ ಹಾಗೂ ಸುತ್ತಮುತ್ತಲ ಗ್ರಾಮಗಳ ಗ್ರಾಮಸ್ಥರಷ್ಟೇ ರಥೋತ್ಸವದಲ್ಲಿ ಇದ್ದರು. ಹಲವು ಮಂದಿ ಗುಂಪುಗುಂಪಾಗಿದ್ದ ದೃಶ್ಯಗಳು ಕಂಡು ಬಂದವು.

‘ಸಂಪ್ರದಾಯದಂತೆ ಯಾವುದೇ ಲೋಪದೋಷಗಳಿಲ್ಲದೇ ಕಾರ್ಯಕ್ರಮ ಮಾಡಿದ್ದೇವೆ. ಈ ಬಾರಿ ತೆಪ್ಪೋತ್ಸವ ಇರುವುದಿಲ್ಲ’ ಎಂದು ದೇಗುಲದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ತಿಳಿಸಿದರು.

ಈ ವೇಳೆ ಪ್ರತಿಕ್ರಿಯಿಸಿದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ‘ಕೊರೊನಾ ಕಾಲದ ಅಗತ್ಯಕ್ಕೆ ತಕ್ಕಂತೆ ಸರಳವಾಗಿ, ಸಾಂಪ್ರದಾಯಿಕವಾಗಿ ರಥೋತ್ಸವ ನಡೆದಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT