<p><strong>ಮೈಸೂರು</strong>: ಆಷಾಢ ಮಾಸದ ಎರಡನೇ ಶುಕ್ರವಾರ ಬೆಟ್ಟದ ಚಾಮುಂಡೇಶ್ವರಿ ತಾಯಿ, ಪಾರ್ವತಿ ಅಲಂಕಾರದಲ್ಲಿ ಕಂಗೊಳಿಸಿದಳು.</p>.<p>ನಸುಕಿನ ನಾಲ್ಕು ಗಂಟೆಗೆ ಆರಂಭವಾದ ಮಹಾನ್ಯಾಸ ಪೂರ್ವಕ ರುದ್ರಾಭಿಷೇಕ, ಪಂಚಾಮೃತಾಭಿಷೇಕ, ವಿಶೇಷ ಪೂಜೆ ಬೆಳಿಗ್ಗೆ 7 ಗಂಟೆಯ ತನಕವೂ ನಡೆಯಿತು. ನಂತರ ಸ್ಥಳೀಯ ಗ್ರಾಮಸ್ಥರಿಗಷ್ಟೇ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.</p>.<p>ಶಾಸಕರಾದ ಎಸ್.ಎ.ರಾಮದಾಸ್, ಜಿ.ಟಿ.ದೇವೇಗೌಡ, ಅಖಂಡ ಶ್ರೀನಿವಾಸಮೂರ್ತಿ ಸಹ ಬೆಟ್ಟಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.</p>.<p>ಬೆಳಿಗ್ಗೆ 8 ಗಂಟೆಗೆ ಮಹಾಮಂಗಳಾರತಿ ನಡೆಯಿತು. ದೇಗುಲದ ಪ್ರಾಂಗಣದಲ್ಲೇ ದೇವಿಯ ಉತ್ಸವ ಜರುಗಿತು. ನಂತರ ಬಾಗಿಲು ಮುಚ್ಚಲಾಯಿತು.</p>.<p>ಸಂಜೆ 6ರಿಂದ 7.30ರವರೆಗೂ ಅಭಿಷೇಕ, ಪಂಚಾಮೃತಾಭಿಷೇಕ, ವಿಶೇಷ ಪೂಜೆ ನಡೆದವು. ರಾತ್ರಿ 8 ಗಂಟೆಗೆ ಮಹಾಮಂಗಳಾರತಿ ನೆರವೇರಿಸಿದ ಬಳಿಕ ದೇಗುಲದ ಬಾಗಿಲು ಮುಚ್ಚಲಾಯಿತು ಎಂದು ಚಾಮುಂಡೇಶ್ವರಿ ದೇವಾಲಯದ ಪ್ರಧಾನ ಅರ್ಚಕ ಎನ್.ಶಶಿಶೇಖರ ದೀಕ್ಷಿತ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p><strong>ಭಕ್ತ ಸಮೂಹದಲ್ಲಿ ನಿರಾಸೆ:</strong> ಕೋವಿಡ್ ಹರಡುವಿಕೆ ತಡೆಗಟ್ಟಲಿಕ್ಕಾಗಿ, ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಇದರಿಂದ ದೇವಿಯ ದರ್ಶನ ಪಡೆಯಲಾಗದ ಅಸಂಖ್ಯಾತ ಭಕ್ತರು ನಿರಾಸೆ ಅನುಭವಿಸಿದರು.</p>.<p>ಬಹಳಷ್ಟು ಭಕ್ತರು ಬೆಟ್ಟದ ಪಾದದಲ್ಲೇ ದೇವಿಗೆ ನಮಿಸಿದರು. ಭಕ್ತರ ಬೆಟ್ಟ ಪ್ರವೇಶ ತಡೆಯಲಿಕ್ಕಾಗಿಯೇ ಬೆಟ್ಟದ ಪಾದ, ಉತ್ತನಹಳ್ಳಿ, ತಾವರೆಕಟ್ಟೆ ಬಳಿ ಬಿಗಿ ಪೊಲೀಸ್ ಪಹರೆ ಹಾಕಲಾಗಿತ್ತು. ಭಕ್ತರಿಲ್ಲದೆ ಚಾಮುಂಡಿಬೆಟ್ಟ ಬಿಕೋ ಎನ್ನುತಿತ್ತು.</p>.<p><strong>ನಿರ್ಬಂಧ ಮುಂದುವರಿಕೆ: </strong>ಚಾಮುಂಡಿಬೆಟ್ಟಕ್ಕೆ ನಿರ್ಬಂಧ ಮುಂದುವರೆದಿದೆ. ಜುಲೈ 30ರ ಆಷಾಢ ಮಾಸದ ಮೂರನೇ ಶುಕ್ರವಾರ ಮತ್ತು ಚಾಮುಂಡೇಶ್ವರಿ ವರ್ಧಂತಿ, ಆ.6ರ ಕೊನೆ ಶುಕ್ರವಾರ ಹಾಗೂ ಆ.8ರ ಭೀಮನ ಅಮಾವಾಸ್ಯೆಯಂದು ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ಇರುವುದಿಲ್ಲ.</p>.<p>ಆಷಾಢ ಮಾಸದ ಶನಿವಾರ, ಭಾನುವಾರ ಹಾಗೂ ಸಾರ್ವತ್ರಿಕ ರಜಾ ದಿನಗಳಂದು ಸಹ ಭಕ್ತಾದಿಗಳಿಗೆ ಹಾಗೂ ಸಾರ್ವಜನಿಕರಿಗೆ ಬೆಟ್ಟಕ್ಕೆ ಪ್ರವೇಶ ಇಲ್ಲ. ಅಲ್ಲದೆ, ನಿತ್ಯ ಸಂಜೆ 6 ಗಂಟೆಯ ನಂತರ ಸಾರ್ವಜನಿಕರ ಚಾಮುಂಡಿಬೆಟ್ಟ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಆಷಾಢ ಮಾಸದ ಎರಡನೇ ಶುಕ್ರವಾರ ಬೆಟ್ಟದ ಚಾಮುಂಡೇಶ್ವರಿ ತಾಯಿ, ಪಾರ್ವತಿ ಅಲಂಕಾರದಲ್ಲಿ ಕಂಗೊಳಿಸಿದಳು.</p>.<p>ನಸುಕಿನ ನಾಲ್ಕು ಗಂಟೆಗೆ ಆರಂಭವಾದ ಮಹಾನ್ಯಾಸ ಪೂರ್ವಕ ರುದ್ರಾಭಿಷೇಕ, ಪಂಚಾಮೃತಾಭಿಷೇಕ, ವಿಶೇಷ ಪೂಜೆ ಬೆಳಿಗ್ಗೆ 7 ಗಂಟೆಯ ತನಕವೂ ನಡೆಯಿತು. ನಂತರ ಸ್ಥಳೀಯ ಗ್ರಾಮಸ್ಥರಿಗಷ್ಟೇ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.</p>.<p>ಶಾಸಕರಾದ ಎಸ್.ಎ.ರಾಮದಾಸ್, ಜಿ.ಟಿ.ದೇವೇಗೌಡ, ಅಖಂಡ ಶ್ರೀನಿವಾಸಮೂರ್ತಿ ಸಹ ಬೆಟ್ಟಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.</p>.<p>ಬೆಳಿಗ್ಗೆ 8 ಗಂಟೆಗೆ ಮಹಾಮಂಗಳಾರತಿ ನಡೆಯಿತು. ದೇಗುಲದ ಪ್ರಾಂಗಣದಲ್ಲೇ ದೇವಿಯ ಉತ್ಸವ ಜರುಗಿತು. ನಂತರ ಬಾಗಿಲು ಮುಚ್ಚಲಾಯಿತು.</p>.<p>ಸಂಜೆ 6ರಿಂದ 7.30ರವರೆಗೂ ಅಭಿಷೇಕ, ಪಂಚಾಮೃತಾಭಿಷೇಕ, ವಿಶೇಷ ಪೂಜೆ ನಡೆದವು. ರಾತ್ರಿ 8 ಗಂಟೆಗೆ ಮಹಾಮಂಗಳಾರತಿ ನೆರವೇರಿಸಿದ ಬಳಿಕ ದೇಗುಲದ ಬಾಗಿಲು ಮುಚ್ಚಲಾಯಿತು ಎಂದು ಚಾಮುಂಡೇಶ್ವರಿ ದೇವಾಲಯದ ಪ್ರಧಾನ ಅರ್ಚಕ ಎನ್.ಶಶಿಶೇಖರ ದೀಕ್ಷಿತ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p><strong>ಭಕ್ತ ಸಮೂಹದಲ್ಲಿ ನಿರಾಸೆ:</strong> ಕೋವಿಡ್ ಹರಡುವಿಕೆ ತಡೆಗಟ್ಟಲಿಕ್ಕಾಗಿ, ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಇದರಿಂದ ದೇವಿಯ ದರ್ಶನ ಪಡೆಯಲಾಗದ ಅಸಂಖ್ಯಾತ ಭಕ್ತರು ನಿರಾಸೆ ಅನುಭವಿಸಿದರು.</p>.<p>ಬಹಳಷ್ಟು ಭಕ್ತರು ಬೆಟ್ಟದ ಪಾದದಲ್ಲೇ ದೇವಿಗೆ ನಮಿಸಿದರು. ಭಕ್ತರ ಬೆಟ್ಟ ಪ್ರವೇಶ ತಡೆಯಲಿಕ್ಕಾಗಿಯೇ ಬೆಟ್ಟದ ಪಾದ, ಉತ್ತನಹಳ್ಳಿ, ತಾವರೆಕಟ್ಟೆ ಬಳಿ ಬಿಗಿ ಪೊಲೀಸ್ ಪಹರೆ ಹಾಕಲಾಗಿತ್ತು. ಭಕ್ತರಿಲ್ಲದೆ ಚಾಮುಂಡಿಬೆಟ್ಟ ಬಿಕೋ ಎನ್ನುತಿತ್ತು.</p>.<p><strong>ನಿರ್ಬಂಧ ಮುಂದುವರಿಕೆ: </strong>ಚಾಮುಂಡಿಬೆಟ್ಟಕ್ಕೆ ನಿರ್ಬಂಧ ಮುಂದುವರೆದಿದೆ. ಜುಲೈ 30ರ ಆಷಾಢ ಮಾಸದ ಮೂರನೇ ಶುಕ್ರವಾರ ಮತ್ತು ಚಾಮುಂಡೇಶ್ವರಿ ವರ್ಧಂತಿ, ಆ.6ರ ಕೊನೆ ಶುಕ್ರವಾರ ಹಾಗೂ ಆ.8ರ ಭೀಮನ ಅಮಾವಾಸ್ಯೆಯಂದು ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ಇರುವುದಿಲ್ಲ.</p>.<p>ಆಷಾಢ ಮಾಸದ ಶನಿವಾರ, ಭಾನುವಾರ ಹಾಗೂ ಸಾರ್ವತ್ರಿಕ ರಜಾ ದಿನಗಳಂದು ಸಹ ಭಕ್ತಾದಿಗಳಿಗೆ ಹಾಗೂ ಸಾರ್ವಜನಿಕರಿಗೆ ಬೆಟ್ಟಕ್ಕೆ ಪ್ರವೇಶ ಇಲ್ಲ. ಅಲ್ಲದೆ, ನಿತ್ಯ ಸಂಜೆ 6 ಗಂಟೆಯ ನಂತರ ಸಾರ್ವಜನಿಕರ ಚಾಮುಂಡಿಬೆಟ್ಟ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>