<p><strong>ಮೈಸೂರು:</strong> ನಾಡದೇವತೆ ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ(ಜನ್ಮದಿನ) ಮಹೋತ್ಸವ ಸೋಮವಾರ (ಜುಲೈ 13) ನಡೆಯಲಿದೆ.</p>.<p>ಅಧಿದೇವತೆ ಚಾಮುಂಡೇಶ್ವರಿಯ ವರ್ಧಂತಿ ಪ್ರತಿ ವರ್ಷವೂ ವಿಜೃಂಭಣೆಯಿಂದ ನಡೆಯುತ್ತಿತ್ತು. ಆದರೆ ಈ ಬಾರಿ ಮಹಾಮಾರಿ ಕೊರೊನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಭಕ್ತರ ಗೈರಿನಲ್ಲಿ ಸರಳವಾಗಿ, ಸಂಪ್ರದಾಯಕ್ಕೆ ಚ್ಯುತಿ ಬಾರದಂತೆ ನಡೆಯಲಿದೆ ಎಂದು ದೇಗುಲದ ಮೂಲಗಳು ತಿಳಿಸಿವೆ.</p>.<p>ವರ್ಧಂತಿ ಅಂಗವಾಗಿ ಚಾಮುಂಡಿ ಬೆಟ್ಟದ ದೇಗುಲದಲ್ಲಿ ಸೋಮವಾರ ನಸುಕಿನ 4.30ರಿಂದ ವಿವಿಧ ಪೂಜಾ ಕೈಂಕರ್ಯ ಆರಂಭವಾಗಲಿವೆ. ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಮಹಾ ಮಂಗಳಾರತಿ ನೆರವೇರಿದ ಬಳಿಕ, ದೇವಸ್ಥಾನದ ಒಳಾಂಗಣದಲ್ಲೇ ದೇವಿಯ ಉತ್ಸವ ಮೂರ್ತಿಯ ಮೆರವಣಿಗೆ ನಡೆಯಲಿದೆ.</p>.<p>’ಅಮ್ಮನವರ ವರ್ಧಂತಿ ಮಹೋತ್ಸವದಲ್ಲಿ ಸಂಪ್ರದಾಯದಂತೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಭಾಗವಹಿಸುವ ಸಾಧ್ಯತೆಯಿದೆ‘ ಎಂದು ಚಾಮುಂಡೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಡಾ.ಶಶಿಶೇಖರ್ ದೀಕ್ಷಿತ್ ತಿಳಿಸಿದರು.</p>.<p><strong>ಪ್ರವೇಶ ನಿಷೇಧ: </strong>ಚಾಮುಂಡೇಶ್ವರಿಯ ವರ್ಧಂತಿ ಮಹೋತ್ಸವದಲ್ಲಿ ಪ್ರತಿ ವರ್ಷವೂ ಹಲವು ಗಣ್ಯರು, ಜನಪ್ರತಿನಿಧಿಗಳು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗಿಯಾಗುತ್ತಿದ್ದರು. ಹೆಚ್ಚಿನ ಜನ ಸೇರಬಾರದು ಎಂದು ಈ ಹಿಂದೆಯೇ ಜಿಲ್ಲಾಡಳಿತ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ.</p>.<p>ನಗರವೂ ಸೇರಿದಂತೆ ಜಿಲ್ಲೆಯ ವಿವಿಧ ದೇಗುಲ, ರಸ್ತೆ ಬದಿ ಅದ್ಧೂರಿಯಿಂದ ಚಾಮುಂಡೇಶ್ವರಿಯ ವರ್ಧಂತಿ ಈ ಹಿಂದಿನ ವರ್ಷಗಳಲ್ಲಿ ನಡೆದಿತ್ತು. ಆದರೆ ಈ ಬಾರಿ ಕೋವಿಡ್–19 ಸೋಂಕು ಹರಡುತ್ತಿದ್ದು, ಎಲ್ಲಿಯೂ ವರ್ಧಂತಿಯ ಆಚರಣೆಯ ಸಿದ್ಧತೆಗಳು ಭಾನುವಾರ ಕಂಡು ಬರಲಿಲ್ಲ.</p>.<p>ಆಷಾಢ ಮಾಸದ ಮೂರನೇ ಶುಕ್ರವಾರದಿಂದಲೂ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಿದ್ದು, ಮಂಗಳವಾರದವರೆಗೂ ಮುಂದುವರೆಯಲಿದೆ ಎಂದು ಆಡಳಿತಾಧಿಕಾರಿ ಯತಿರಾಜ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ನಾಡದೇವತೆ ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ(ಜನ್ಮದಿನ) ಮಹೋತ್ಸವ ಸೋಮವಾರ (ಜುಲೈ 13) ನಡೆಯಲಿದೆ.</p>.<p>ಅಧಿದೇವತೆ ಚಾಮುಂಡೇಶ್ವರಿಯ ವರ್ಧಂತಿ ಪ್ರತಿ ವರ್ಷವೂ ವಿಜೃಂಭಣೆಯಿಂದ ನಡೆಯುತ್ತಿತ್ತು. ಆದರೆ ಈ ಬಾರಿ ಮಹಾಮಾರಿ ಕೊರೊನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಭಕ್ತರ ಗೈರಿನಲ್ಲಿ ಸರಳವಾಗಿ, ಸಂಪ್ರದಾಯಕ್ಕೆ ಚ್ಯುತಿ ಬಾರದಂತೆ ನಡೆಯಲಿದೆ ಎಂದು ದೇಗುಲದ ಮೂಲಗಳು ತಿಳಿಸಿವೆ.</p>.<p>ವರ್ಧಂತಿ ಅಂಗವಾಗಿ ಚಾಮುಂಡಿ ಬೆಟ್ಟದ ದೇಗುಲದಲ್ಲಿ ಸೋಮವಾರ ನಸುಕಿನ 4.30ರಿಂದ ವಿವಿಧ ಪೂಜಾ ಕೈಂಕರ್ಯ ಆರಂಭವಾಗಲಿವೆ. ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಮಹಾ ಮಂಗಳಾರತಿ ನೆರವೇರಿದ ಬಳಿಕ, ದೇವಸ್ಥಾನದ ಒಳಾಂಗಣದಲ್ಲೇ ದೇವಿಯ ಉತ್ಸವ ಮೂರ್ತಿಯ ಮೆರವಣಿಗೆ ನಡೆಯಲಿದೆ.</p>.<p>’ಅಮ್ಮನವರ ವರ್ಧಂತಿ ಮಹೋತ್ಸವದಲ್ಲಿ ಸಂಪ್ರದಾಯದಂತೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಭಾಗವಹಿಸುವ ಸಾಧ್ಯತೆಯಿದೆ‘ ಎಂದು ಚಾಮುಂಡೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಡಾ.ಶಶಿಶೇಖರ್ ದೀಕ್ಷಿತ್ ತಿಳಿಸಿದರು.</p>.<p><strong>ಪ್ರವೇಶ ನಿಷೇಧ: </strong>ಚಾಮುಂಡೇಶ್ವರಿಯ ವರ್ಧಂತಿ ಮಹೋತ್ಸವದಲ್ಲಿ ಪ್ರತಿ ವರ್ಷವೂ ಹಲವು ಗಣ್ಯರು, ಜನಪ್ರತಿನಿಧಿಗಳು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗಿಯಾಗುತ್ತಿದ್ದರು. ಹೆಚ್ಚಿನ ಜನ ಸೇರಬಾರದು ಎಂದು ಈ ಹಿಂದೆಯೇ ಜಿಲ್ಲಾಡಳಿತ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ.</p>.<p>ನಗರವೂ ಸೇರಿದಂತೆ ಜಿಲ್ಲೆಯ ವಿವಿಧ ದೇಗುಲ, ರಸ್ತೆ ಬದಿ ಅದ್ಧೂರಿಯಿಂದ ಚಾಮುಂಡೇಶ್ವರಿಯ ವರ್ಧಂತಿ ಈ ಹಿಂದಿನ ವರ್ಷಗಳಲ್ಲಿ ನಡೆದಿತ್ತು. ಆದರೆ ಈ ಬಾರಿ ಕೋವಿಡ್–19 ಸೋಂಕು ಹರಡುತ್ತಿದ್ದು, ಎಲ್ಲಿಯೂ ವರ್ಧಂತಿಯ ಆಚರಣೆಯ ಸಿದ್ಧತೆಗಳು ಭಾನುವಾರ ಕಂಡು ಬರಲಿಲ್ಲ.</p>.<p>ಆಷಾಢ ಮಾಸದ ಮೂರನೇ ಶುಕ್ರವಾರದಿಂದಲೂ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಿದ್ದು, ಮಂಗಳವಾರದವರೆಗೂ ಮುಂದುವರೆಯಲಿದೆ ಎಂದು ಆಡಳಿತಾಧಿಕಾರಿ ಯತಿರಾಜ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>