ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ಬೆಟ್ಟ ಕುಸಿತ; ಜಿಯೋ ಟ್ರೆಲ್ ತಂತ್ರಜ್ಞಾನದ ಬಳಕೆಗೆ ನಿರ್ಧಾರ

Last Updated 14 ನವೆಂಬರ್ 2021, 6:20 IST
ಅಕ್ಷರ ಗಾತ್ರ

ಮೈಸೂರು: ‘ಚಾಮುಂಡಿ ಬೆಟ್ಟದ ಕುಸಿದಿರುವ ರಸ್ತೆಯನ್ನು ಜಿಯೋ ಟ್ರೆಲ್ ತಂತ್ರಜ್ಞಾನದ ಮೂಲಕ ದುರಸ್ತಿ ನಡೆಸಲಾಗುವುದು’ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ ತಿಳಿಸಿದರು.

ಕುಸಿದಿರುವ ಪ್ರದೇಶಕ್ಕೆ ಶನಿವಾರ ಭೇಟಿ ನೀಡಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ‘ಮಣ್ಣಿನ ಹೀರಿಕೊಳ್ಳುವ ಸಾಮರ್ಥ್ಯ ಮೀರಿ ತೇವಾಂಶ ಹೆಚ್ಚಾಗಿದ್ದರಿಂದ ರಸ್ತೆ ಕುಸಿದಿದೆ. ತಜ್ಞರ ಸಲಹೆಯಂತೆ ಆಧುನಿಕ ತಂತ್ರಜ್ಞಾನ ಬಳಸಿ ದುರಸ್ತಿ ಮಾಡಲಾಗುವುದು. ಚುನಾವಣಾ ನೀತಿ ಸಂಹಿತೆ ಇರುವುದರಿಂದ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲಾಗದು’ ಎಂದು ಅವರು ಇಲ್ಲಿ ಸುದ್ದಿಗಾರರಿಗೆ ಹೇಳಿದರು.

‘ಎಲ್ಲೆಲ್ಲಿ ರಸ್ತೆ ಕುಸಿಯಬಹುದು ಎಂಬ ಕುರಿತು ಸಮೀಕ್ಷೆ ನಡೆಸಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಇಲ್ಲಿನ ಕೆ.ಆರ್.ಮಿಲ್- ಕೆಸರೆ ಬಳಿಯ ಸೇತುವೆ ಕೂಡ ಕುಸಿದಿದೆ. ಅದನ್ನೂ ಕೂಡ ಸದ್ಯದಲ್ಲಿಯೇ ದುರಸ್ತಿಪಡಿಸುವುದಾಗಿ ಅವರು ಹೇಳಿದರು.

‘ಬಿಟ್‌ಕಾಯಿನ್ ಹಗರಣದಲ್ಲಿ ಆರೋಪಿಯನ್ನು ಬಂಧಿಸಿದ್ದೇ ಬಿಜೆಪಿ ಸರ್ಕಾರ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವುದಾಗಿ ಮುಖ್ಯಮಂತ್ರಿ ಈಗಾಗಲೇ ಘೋಷಿಸಿದ್ದಾರೆ. ಕಾಂಗ್ರೆಸ್‌ನವರು ಹುಸಿ ಆರೋಪಗಳನ್ನು ಮಾಡಬಾರದು’ ಎಂದರು.

ಸಂಸದ ಪ್ರತಾಪ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್, ಬಿಜೆಪಿ ನಗರ ಘಟಕದ ಅಧ್ಯಕ್ಷ ಟಿ.ಎಸ್.ಶ್ರೀವತ್ಸ ಇದ್ದರು.

ಏನಿದು ಜಿಯೋ ಟ್ರೆಲ್ ತಂತ್ರಜ್ಞಾನ?
ಭಾರತೀಯ ವಿಜ್ಞಾನ ಸಂಸ್ಥೆ ರೂಪಿಸಿರುವ ಜಿಯೋ ಟ್ರೆಲ್ ತಂತ್ರಜ್ಞಾನವು ಪರಿಸರಸ್ನೇಹಿ ಎನಿಸಿದೆ. ಕಾಂಕ್ರೀಟ್‌ನ್ನು ಬಳಸದೇ ಸ್ಥಳದಲ್ಲೇ ಲಭ್ಯವಿರುವ ಮಣ್ಣು, ಜಲ್ಲಿಕಲ್ಲುಗಳನ್ನು ಬಳಸಿ ದುರಸ್ತಿ ಕಾರ್ಯ ಮಾಡಲಾಗುತ್ತದೆ. ಈಗಾಗಲೇ ಮಡಿಕೇರಿ ಹಾಗೂ ಕೆಲವೆಡೆ ಇಂತಹ ಕಾಮಗಾರಿಗಳು ನಡೆಯುತ್ತಿದ್ದು, ಸದ್ಯ ಮೈಸೂರಿನಲ್ಲೂ ಇದೇ ತಂತ್ರಜ್ಞಾನದ ನೆರವು ಪಡೆಯಲು ಉದ್ದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT