ಹೂಡಿಕೆದಾರರಿಗೆ ₹13 ಕೋಟಿಯಷ್ಟು ವಂಚನೆಯಾಗಿದೆ ಎಂದು ಆರೋಪಿಸಿ ಮೈಸೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರುಗಳು ದಾಖಲಾಗಿದ್ದವು. ಪ್ರಕರಣದ ತನಿಖೆ ನಡೆಸಿದ ಸಿಐಡಿ, ಸಾಮಾನ್ಯ ಆರೋಪಪಟ್ಟಿ ಸಲ್ಲಿಸಿತ್ತು. ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ಕೆಪಿಐಡಿ) ಕಾಯ್ದೆಯಡಿ ಕ್ರಮ ತೆಗೆದುಕೊಳ್ಳಲು ಇನ್ಸ್ಪೆಕ್ಟರ್ ಸಮರ್ಥ ಅಧಿಕಾರಿ ಅಲ್ಲ ಎಂದು ಅಭಿಪ್ರಾಯಪಟ್ಟಿದ್ದ ಮೈಸೂರು ಜಿಲ್ಲಾ ನ್ಯಾಯಾಲಯ, ಆರೋಪಿಗಳನ್ನು ಬಿಡುಗಡೆ ಮಾಡಿತ್ತು.