ಭಾನುವಾರ, ಏಪ್ರಿಲ್ 2, 2023
31 °C

ಒಲಿಂಪಿಯನ್‌ಗಳಿಗೆ ಹುಮ್ಮಸ್ಸು ತುಂಬಲು ‘ಚಿಯರ್‌ ಫಾರ್‌ ಇಂಡಿಯಾ’ ಅಭಿಯಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಟೋಕಿಯೊ ಒಲಿಂಪಿಕ್ಸ್‌ಗೆ ಸಜ್ಜಾಗುತ್ತಿರುವ ಭಾರತೀಯ ಕ್ರೀಡಾಪಟುಗಳಲ್ಲಿ ಹುಮ್ಮಸ್ಸು ತುಂಬಲು ನೈರುತ್ಯ ರೈಲ್ವೆ ಮುಂದಾಗಿದೆ.

ಈ ನಿಟ್ಟಿನಲ್ಲಿ ನೈರುತ್ಯ ರೈಲ್ವೆ ಮೈಸೂರು ವಿಭಾಗೀಯ ವತಿಯಿಂದ ಮೈಸೂರು, ಹಾಸನ, ಅರಸೀಕೆರೆ ಹಾಗೂ ಶಿವಮೊಗ್ಗ ರೈಲ್ವೆ ನಿಲ್ದಾಣಗಳ ಸೆಲ್ಫಿ ಪಾಯಿಂಟ್‌ನಲ್ಲಿ  ‘ಚಿಯರ್‌ ಫಾರ್‌ ಇಂಡಿಯಾ’ ಅಭಿಯಾನ ಆರಂಭಿಸಲಾಗಿದೆ.

ಈ ಸೆಲ್ಫಿ ಪಾಯಿಂಟ್‌ಗಳಲ್ಲಿ ರೈಲ್ವೆ ಪ್ರಯಾಣಿಕರು ಕ್ರೀಡಾಪಟುಗಳಿಗೆ ಚಿಯರ್‌ ಮಾಡುವ ಸೆಲ್ಫಿ ತೆಗೆದುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್‌ ಮಾಡುವಂತೆ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ರಾಹುಲ್ ಅಗರವಾಲ್‌ ಕೋರಿದ್ದಾರೆ.

ಈ ಮೂಲಕ ಜುಲೈ 23ರಂದು ಆರಂಭವಾಗಲಿರುವ ಒಲಿಂಪಿಕ್‌ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವ ಕ್ರೀಡಾಪಟುಗಳಿಗೆ ಸ್ಫೂರ್ತಿ ತುಂಬುವ ಅಭಿಯಾನಕ್ಕೆ ಕೈಜೋಡಿಸುವಂತೆ ಕರೆ ನೀಡಿದ್ದಾರೆ.

ರೈಲ್ವೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ರೀಡಾಪಟುಗಳು ಈಗಾಗಲೇ ಸೆಲ್ಫಿ ತೆಗೆದುಕೊಂಡು ಹಂಚಿಕೊಳ್ಳುತ್ತಿದ್ದಾರೆ.  ಭಾರತೀಯ ರೈಲ್ವೆ ವತಿಯಿಂದ ದೇಶದಾದ್ಯಂತ ‘ಚಿಯರ್‌ ಫಾರ್‌ ಇಂಡಿಯಾ’ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು