ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಅವರು, ‘ದೇಹಗಳ ಮೇಲೆ ಯಾವುದೇ ಗಾಯದ ಗುರುತುಗಳು ಪತ್ತೆಯಾಗಿಲ್ಲ. ವಿಷ ಸೇವನೆಯಿಂದ ಮೃತಪಟ್ಟಿರುವುದಕ್ಕೂ ಸಾಕ್ಷ್ಯ ಲಭ್ಯವಾಗಿಲ್ಲ. ದೇಹದ ಅಂಗಾಂಗಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗುವುದು. ಅಲ್ಲಿಂದ ವರದಿ ಬಂದ ಮೇಲಷ್ಟೇ ಸಾವಿಗೆ ನಿಖರ ಕಾರಣ ತಿಳಿಯಲಿದೆ’ ಎಂದು ಹೇಳಿದ್ದಾರೆ.