ಮೈಸೂರು:‘ಜನರಲ್ಲಿ ಅಶಾಂತಿ, ಗೊಂದಲ ಸೃಷ್ಟಿಸಲು ಕೆಲ ಶಕ್ತಿಗಳು ಪ್ರಯತ್ನ ನಡೆಸುತ್ತಿದ್ದು, ದೇಶದ ಕಾನೂನಿಗೆ ವಿರುದ್ಧವಾಗಿ ವರ್ತಿಸುತ್ತಿವೆ. ಅದರ ಒಂದು ಭಾಗವಾಗಿ ಅಲ್ಕೈದಾ ಎಂದು ಹೇಳಿಕೊಂಡು ವಿಡಿಯೊ ಹರಿಬಿಡಲಾಗಿದೆ. ಅದರ ನೈಜತೆ ಬಗ್ಗೆ ವಿಚಾರಣೆ ನಡೆಸಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ತಿಳಿಸಿದರು.