ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಮಾಜಿ ಸಚಿವರಾದ ಸಿ.ಎಚ್.ವಿಜಯಶಂಕರ್, ರಾಣಿ ಸತೀಶ್, ಜಿ.ಪಂ.ಸದಸ್ಯರಾದ ಡಿ.ರವಿಶಂಕರ್, ಅಮಿತ್ ದೇವರಟ್ಟಿ ಉಪಸ್ಥಿತರಿದ್ದರು. ಶಾಸಕ ಸಾ.ರಾ.ಮಹೇಶ್ ಅಧ್ಯಕ್ಷತೆ ವಹಿಸಿದ್ದರು. ಬಾಳೆಹೊನ್ನೂರಿನ ರಂಭಾಪುರಿ ಮಠದ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು.