ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಮುಂಡಿಬೆಟ್ಟಕ್ಕೆ ಸೋಮವಾರ ಭೇಟಿ ನೀಡಲಿರುವುದರಿಂದ ಚಾಮುಂಡೇಶ್ವರಿ ದೇಗುಲಕ್ಕೆ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಇದರಿಂದ ದೇಗುಲದ ಹೊರ ಆವರಣ ಬಿಕೊ ಎನ್ನುತ್ತಿದೆ.
ಸಚಿವರಾದ ಭೈರತಿ ಬಸವರಾಜು, ಡಾ.ಸುಧಾಕರ, ಎಸ್.ಟಿ.ಸೋಮಶೇಖರ್, ವಿ.ಸೋಮಣ್ಣ, ಮುರುಗೇಶ್ ನಿರಾಣಿ, ಕೆ.ಸಿ. ನಾರಾಯಣಗೌಡ, ಮುನಿರತ್ನ ಬರುವ ನಿರೀಕ್ಷೆ ಇದೆ.